10:05 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ದ.ಕ.: ಒಟ್ಟು 130 ಕಿ.ಮೀ. ಉದ್ದದ ಮಾನವ ಸರಪಳಿಗೆ ಸಾಕ್ಷಿಯಾಗಲಿದೆ ಸೆ. 15; ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ

13/09/2024, 21:19

ಮಂಗಳೂರು(reporterkarnataka.com): ಸೆಪ್ಟೆಂಬರ್ 15ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.ಭಾನುವಾರ ಬೆಳಿಗ್ಗೆ 9.30ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಬೇಕು. 9:37ರಿಂದ 9.40 ರವರೆಗೆ ನಾಡಗೀತೆ, 9.41ರಿಂದ 9:55ರ ವರೆಗೆ ಮುಖ್ಯ ಅತಿಥಿಗಳಿಂದ ಭಾಷಣ, 9:55ರಿಂದ 9:57ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, 9:57 ರಿಂದ 9:59 ರವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು. ಬೆಳಿಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಲಿದ್ದಾರೆ.
ಈಗಾಗಲೇ ಈ ಬೃಹತ್ ಮಾನವ ಸರಪಳಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿದೆ. ವಿದ್ಯಾರ್ಥಿಗಳು, ಯುವಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ಸಿಬ್ಬಂಧಿಗಳು ಸೇರಿದಂತೆ ಸಾರ್ವಜನಿಕರು ಈ ಮಾನವ ಸರಪಳಿಯಲ್ಲಿ ಭಾಗವಹಿಸಲಿದ್ದಾರೆ.
ಸುಗಮ ಸಂಚಾರಕ್ಕಾಗಿ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು