7:11 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

18/09/2024, 23:07

ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ ಜೊತೆಯಲ್ಲಿ ಜಂಟಿಯಾಗಿ ಪಡೆಯಲಿದ್ದಾರೆ ಎಂದು ಹಿರಿಯ ಪತ್ರಕರ್ತರು, ಬಹು ಭಾಷಾ ಸಾಹಿತಿ ಹಾಗೂ ಅಖಿಲ ಭಾರತ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ತಿಳಿಸಿದ್ದಾರೆ.
ಇದೇ ಸಪ್ಟೆಂಬರ್ 22ರಂದು ರ ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸನ್ಮಾನ ನಡೆಯಲಿದೆ.
ಕೇರಳ, ಕರ್ನಾಟಕ, ಗೋವಾ, ಆಂದ್ರ, ಮಹಾರಾಷ್ಟ್ರ, ದೆಹಲಿ ಪ್ರದೇಶದ ಕೊಂಕಣಿ ಮಾತೃಭಾಷೆ ಚಾರೊಳಿ ಸಾಹಿತಿಗಳು, ಚಿಂತಕರು, ವಿಷಯಗಳ ಮಂಡನೆ ಹಾಗೂ ಕವಿವಾಣಿ ಸಾಧರ ಪಡಿಸುವರು.
ಇದರ ಹಿಂದೆ ಮೊದಲಿಗೆ 2022 ರಲ್ಲಿ ಗೋವಾದ ಕಲಾ ಶಿಕ್ಷಕರು ಹಾಗೂ ಕವಿ, ಸಾಹಿತಿ ಗೌರೀಶ ವರ್ಣೇಕರ್ ಹಾಗೂ ಕೇರಳದ ಹಿರಿಯ ಕವಿ ಆರ್. ಎಸ್. ಭಾಸ್ಕರ್ ಹಾಗೂ 2023ರ ದ್ವಿತೀಯ ಸಮ್ಮೇಳನದಲ್ಲಿ ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ರಾಜಯ್ ಪವಾರ್ ಸನ್ಮಾನಿತರಾಗಿದ್ದರು.
ಮೊದಲ ಸಮ್ಮೇಳನ ಮಂಗಳೂರು, ದ್ವಿತೀಯ ಮತ್ತು ಇದು ತೃತೀಯ ಗೋವಾದಲ್ಲಿ ರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಲಿವೆ.
ಸ್ಥಳೀಯ ಗೋವಾದ ಕವಿಕೂಟ ಉಗ್ತೆಂ ಮೊಳಬ್ ಈ ಬಾರಿಯ ಸ್ಥಳೀಯ ಸಂಯೋಜಕ ಸಂಸ್ಥೆಯಾಗಿ ಸಮ್ಮೇಳನದ ಆಯೋಜನೆ ಮಾಡಲಿದೆ.
ಕಳೆದ 2023 ರ ಗೋವಾ ರಾಜ್ಯದ ‌ಕೊಂಕಣಿ ಲೇಖಕರ ಸಂಘ ಸಮ್ಮೇಳನ ಸಂಯೋಜನೆ ಮಾಡಿದ್ದರು.
ಆಖಿಲ ಭಾರತ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಆಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಬಾರಿ ಗೋವಾದ ವಿವೇಕ ಪಿಸೂಲೆಕರ್, ಗೌರೀಶ ವರ್ಣೇಕರ್, ಕಾರವಾರದ ಸಂದೇಶ ಬಾಂದೇಕರ್,ಈ ರಾಷ್ಟ್ರೀಯ ಸಮ್ಮೇಳನದ ಸಂಯೋಜನೆ ‌ಮಾಡಲು ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಸಂಚಾಲಕರಾಗಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು