6:11 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ

04/10/2024, 20:42

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.
ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದೆ. ಇ-ಆಸ್ತಿ ತಂತ್ರಾಂಶವನ್ನು ಕಾವೇರಿ- 2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೋಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿ ಮಾಡುವಾಗ ಉಪ-ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ- ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು