11:50 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ 7ನೇ ವಾರ್ಷಿಕ ಹಬ್ಬ: ಪವಿತ್ರಾ ಪೂಜಾ ಬಲಿದಾನ ಅರ್ಪಣೆ

12/10/2024, 18:18

ಮಂಗಳೂರು(reporterkarnataka com): ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಸದಸ್ಯರು ಅಕ್ಟೋಬರ್ 5 ರಂದು ಸಂಜೆ ತಮ್ಮ ಸಭೆಯ 7ನೇ ವಾರ್ಷಿಕ ಹಬ್ಬವನ್ನು ಆಚರಿಸಿದರು. ದೇವರಿಗೆ ಸ್ತುತಿ ಸಲ್ಲಿಸಿ ಪವಿತ್ರಾ ಪೂಜಾ ಬಲಿದಾನ ಅರ್ಪಿಸಿ ಚರ್ಚ್ ಸಭಾ ಮಂದಿರದಲ್ಲಿ ಚಿಕ್ಕ ಕಾರ್ಯಕ್ರಮ ನಡೆಸಿದರು. ಆಂಜೆಲೊರ್ ಚರ್ಚಿನ ಪ್ರಧಾನ ಗುರು ವಂದನೀಯ ಫೆಡ್ರಿಕ್ ಮೊಂತೆರೊರವರು ಅಧ್ಯಕ್ಷತೆ ವಹಿಸಿದರು. ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಪ್ರಾಂತೀಯಾ ಸಹಾಯಕರಾದ ವಂದನೀಯ ಪ್ರಕಾಶ್ ಲೋಬೊ ಹಾಗೂ ಚರ್ಚಿನ ಸಹಾಯಕ ಗುರು ವಂದನೀಯ ಸ್ಟೇನಿ ಲೋಬೊ, ಆಂಜೆಲೊರ್ ಚರ್ಚಿನ ಉಪಾಧ್ಯಕ್ಷ ಸಹೋದರ ಪಾವ್ಲ್ ರೊಡ್ರಿಗಸ್, ಕಾರ್ಯದರ್ಶಿ ಸಹೋದರಿ ಲೋಲಿನಾ ಡಿ’ಸೋಜ , 21 ಆಯೋಗಗಳ ಸಂಚಾಲಕಿ ಸಹೋದರಿ ರೆನಿಟಾ ಮಿನೇಜಸ್, ಪ್ರಾಂತೀಯ ಖಜಾಂಚಿ ಸಹೋದರ ಆಲ್ವಿನ್ ಮೊಂತೆರೊ ಹಾಗೂ ಪ್ರತಿನಿಧಿ ಅತಿಥಿಗಳಾಗಿದ್ದರು.
ಅಧ್ಯಕ್ಷೆ ಸಹೋದರಿ ಸಿಂತಿಯಾ ರುಜಾರಿಯೊ ಸ್ವಾಗತಿಸಿದರು. ಕಾರ್ಯದರ್ಶಿ ಸಹೋದರಿ ಸುನೀತಾ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು. ಮನೋರಂಜನ ಕಾರ್ಯಕ್ರಮದೊಡನೆ ದೇವರನ್ನು ಹರಸಿ ಕಾರ್ಯಕ್ರಮ ಕೊನೆಗೊಂಡಿತು. ಸಹೋದರಿ ಸವಿತಾ ಫೆಲ್ಸಿ ರೊಡ್ರಿಗಸ್ ಕಾರ್ಯ ನಿಯೋಜಿಸಿದರು. ಸಹೋದರ ಡೆನಿಸ್ ಡಿ’ಸೋಜ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು