8:02 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ

24/10/2024, 14:55

ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತು.
ಈ ಕಾರ್ಯಾಗಾರದಲ್ಲಿ ಚರ್ಚಿನ 21 ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಾಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಾಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.
ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.
ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.
ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು