9:15 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನದ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

27/10/2024, 22:35

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್ ಹಾಗೂ ಸೀಲ್ ಬಳಸಿ ವಂಚನೆ ಮಾಡಿದ ಪ್ರಕರಣ ಕುರಿತು ಕೇಸ್ ದಾಖಲಿಸಲಾಗಿದೆ.
ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾಸ್ಕರ ಭಟ್ ಬಿ. ಮಂಗಳಾದೇವಿ ಎಂಬವರು ತಾವೇ ಕಾರ್ಯದರ್ಶಿ ಎಂದು ಹೇಳಿಕೊಂಡು ಸಂಘದ ನಕಲಿ ಕಾಗದ ಪತ್ರ ತಯಾರಿಸಿ ಲೆಟರ್ ಹೆಡ್ ಮತ್ತು ಸೀಲ್ ಬಳಸಿ ಮೋಸ ವಂಚನೆ ಮಾಡಿದ್ದಾರೆ ಎಂದು ಶಿವಳ್ಳಿ ಸ್ಪಂದನ ಕಾರ್ಯದರ್ಶಿ ಕದ್ರಿಯ ಕೆ. ಕೃಷ್ಣ ಭಟ್ ದೂರು ನೀಡಿದ್ದರು.

ಡಿಆರ್ ರಿಜಿಸ್ಡ್ರಾರ್ ಕಚೇರಿಗೆ ಸಂಘದ ನವೀಕರಣ ಮಾಡಲು ಹೋದಾಗ ಅಲ್ಲಿ ಭಾಸ್ಕರ ಭಟ್ ಬೇರೆಯೇ ಪದಾಧಿಕಾರಿಗಳ ಪಟ್ಟಿ ನೀಡಿ ಅರ್ಜಿ ಸಲ್ಲಿಸಿದ್ದರು.
ಅಲ್ಲಿಂದ ಸ್ವೀಕೃತಿ ಪತ್ರ ಬರೆದು ಇತರ ನಕಲಿ ಕಾಗದ ಪತ್ರಗಳನ್ನು ಕರ್ನಾಟಕ ಬ್ಯಾಂಕಿಗೆ ನೀಡಿ ಅಲ್ಲಿಯೂ ಅವರ ಹೆಸರಿನ ಜತೆ ಉದಯಶಂಕರ ಭಟ್, ಗಿರೀಶ್ ಎಂಬವರ ಹೆಸರನ್ನು ಬ್ಯಾಂಕ್ ಖಾತೆಯಲ್ಲಿ ನೋಂದಣಿ ಮಾಡಿದ್ದರು. ಖಾತೆಯಲ್ಲಿರುವ ಹಣವನ್ನು ಲಪಟಾಯಿಸಲು ಈ ಕೃತ್ಯ ನಡೆಸಿದ್ದರು ಎಂದು ಕಾರ್ಯದರ್ಶಿ ಕೃಷ್ಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು