5:52 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ

02/11/2024, 16:23

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್‌ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 9 ಗಂಟೆಗೆ ಸಿಟಿ ವಲಯದ ಪ್ರಧಾನ ಗುರುಗಳಾದ ವಂದನೀಯ ಜೇಮ್ಸ್ ಡಿಸೋಜ ಅವರು ನೆರವೇರಿಸಿದರು. ವೇದಿಕೆಯಲ್ಲಿ ಧರ್ಮ ಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಲೋಬೊ, ವಸತಿ ಯಾಜಕರಾದ ವಂದನೀಯ ಸ್ಟ್ತಾನಿ ಫೆರ್ನಾಂಡಿಸ್, ಸೇವಾದರ್ಶಿ ಬ್ರ. ಜೀವನ್ ಲೋಬೊ, ವೈಸಿಎಸ್ ವಲಯ ನಿರ್ದೇಶಕರಾದ ವಂದನೀಯ ವಿಜಯ ಮೊಂತೆರೊ, ಧರ್ಮಕ್ಷೇತ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪೌಲ್ ರೊಡ್ರಿಗಸ್, ಕಾರ್ಯದರ್ಶಿ ಲೊಲಿನಾ ಡಿಸೋಜ, ವಲಯ ಸಚೇತಕಿ ರೆನಿಟಾ ಮಿನೇಜಸ್, ಘಟಕ ಸಚೇತಕ ರೋಶನ್ ಪತ್ರಾವೊ, ಧರ್ಮಪ್ರಾಂತ್ಯದ ವೈಸಿಎಸ್ ಅಧ್ಯಕ್ಷ ಡಿಯೋನ್ ಸಲ್ದಾನಾ, ವಲಯ ವೈಸಿಎಸ್ ಅಧ್ಯಕ್ಷ ಡ್ಯಾರೆಲ್ ಮೊಂತೇರೊ, ಘಟಕಾಧ್ಯಕ್ಷ ಲಿಯೋನ್ ಡಿಸೋಜ ಅವರು ಉಪಸ್ಥಿತರಿದ್ದರು.
ವೈಯಕ್ತಿಕ ಗಾಯನ, ಪಂಗಡ ಗಾಯನ ಹಾಗೂ ವೆರೈಟಿ ವಿಭಾಗಗಳಲ್ಲಿ 9 ಘಟಕಗಳ 130 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಜೆ 4.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಸಿಎಸ್ ಕುಲಶೇಖರ ಘಟಕ ಪ್ರಥಮ ಸಮಗ್ರ ಪ್ರಶಸ್ತಿ, ಆಂಜೆಲೊರ್ ವೈಸಿಎಸ್ ಘಟಕ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು