1:34 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ

04/11/2024, 22:43

ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ.


ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗಿದ್ದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದರು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ಈ ಹಿನ್ನಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಈ ಪೈಕಿ ಮಣಿಪಾಲ ಆಸ್ಪತ್ರೆಯಿಂದ ಶವದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಬಾಲಕೃಷ್ಣ ಪೂಜಾರಿ ಸಾವಿನ ಕುರಿತು ಆತನ ಸಂಬಧಿಕರು ನೀಡಿರುವ ಸಂಶಯಾಸ್ಪದ ದೂರಿಗೆ ಹಾಗೂ ವೈದ್ಯಕೀಯ ವರದಿಗೆ ತಾಳೆಯಾಗುತ್ತಿದ್ದು ಬಾಲಕೃಷ್ಣ ಪೂಜಾರಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಮುಖದ ಮೇಲೆ ಗಾಯದ ಗುರುತುಗಳು ಮೂಡಿವೆ ಎಂದು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಮರಣೋತ್ತರ ವರದಿ ಆಧಾರಿಸಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು