12:06 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು