6:50 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಹಿಳೆಯರೇ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಪಲ್ಟಿ: 6ಕ್ಕೂ ಹೆಚ್ಚು ಮಂದಿಗೆ ಗಾಯ; ಕೊಲ್ಲೂರಿನಿಂದ ವಾಪಸಾಗುತ್ತಿದ್ದಾಗ ದುರ್ಘಟನೆ

16/11/2024, 11:15

ಹೊಸನಗರ(reporterkarnataka.com): ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಚಿಕ್ಕಪೇಟೆ ಸರ್ಕಲ್ ಸಮೀಪದ ಶ್ರೀಧರಪುರ ಬಳಿ ಕೊಲ್ಲೂರಿನಿಂದ ವಾಪಸಾಗುತ್ತಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯೊಡೆದ ಪರಿಣಾಮ 6 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ.
ಡಜನಿಗೂ ಹೆಚ್ಚು ಮಹಿಳೆಯರೇ ತುಂಬಿದ್ದ ಟಿಟಿ ವಾಹನ ಕೊಲ್ಲೂರು ಹೆದ್ದಾರಿಯಲ್ಲಿ‌ ಶುಕ್ರವಾರ ರಾತ್ರಿ11 ರ ವೇಳೆಗೆಅಪಘಾತಕ್ಕೀಡಾಗಿತ್ತು.
ಅಪಘಾತದಲ್ಲಿ ಸರಸ್ವತಿ, ಸರೋಜಾ,ಕಮಲಾ, ಜ್ಯೋತಿ, ಗೌರಮ್ಮ, ಶಾರದಾ ಸೇರಿದಂತೆ 6ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಬಳಿಕ ಮೂರು ಮಹಿಳೆಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರೆಲ್ಲ ಶಿಕಾರಿಪುರ ತಾಲೂಕಿನ ಬಿ ಅಣ್ಣಾಪುರ ಗ್ರಾಮದವರಾಗಿದ್ದಾರೆ.
ಕೊಲ್ಲೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಟಿಟಿ ವಾಹನ ರಸ್ತೆ‌ ಮೇಲೆ ಪಲ್ಟಿ ಹೊಡೆದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು