1:06 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ನವ ದಿನಗಳ ನೊವೆನಾಕ್ಕೆ ಚಾಲನೆ: ಡಿ.8ರಂದು ವಾರ್ಷಿಕ ಹಬ್ಬ

28/11/2024, 23:38

ಮಂಗಳೂರು(reporterkarnataka.com): ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಮಾತೆ ಮೇರಿಗೆ ಸಮರ್ಪಿಸಿದ ನಗರದ ಲೇಡಿಹಿಲ್ ಉರ್ವ ಚರ್ಚಿನ ದೇವಾಲಯದಲ್ಲಿರುವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ಡಿ.8ರಂದು ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನವದಿನಗಳ ನೊವೆನಾಕ್ಕೆ ಗುರುವಾರ ಚಾಲನೆ ನೀಡಲಾಯಿತು.


ಮಂಗಳೂರು ಎಪಿಸ್ಕೋಪಲ್ ಸಿಟಿ ಡೀನರಿಯ ಮುಖ್ಯಗುರು ಹಾಗೂ ಮಿಲಾಗ್ರಿಸ್ ಚರ್ಚಿನ ಪ್ರಧಾನ ಧರ್ಮಗುರು ಫಾ.ಬೊನವೆಂಚರ್ ನಜರೇತ್ ಅವರು ನವದಿನಗಳ ನೊವೆನಾಕ್ಕೆ ಚಾಲನೆಯನ್ನು ನೀಡಿದರು. ನೊವೆನಾಕ್ಕೂ ಮೊದಲು ಪುಣ್ಯ ಕ್ಷೇತ್ರದಲ್ಲಿ ಹಬ್ಬದ ಅಂಗವಾಗಿ ಧ್ವಜರೋಹಣವನ್ನು ನಡೆಸಲಾಯಿತು. ಈ ಸಂದರ್ಭ ಉರ್ವ ಲೇಡಿಹಿಲ್ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ, ಸಹಾಯಕ ಧರ್ಮಗುರು ಫಾ. ಲ್ಯಾನ್ಸನ್ ಪಿಂಟೋ, ವಿಶ್ರಾಂತ ಧರ್ಮಗುರು ಫಾ. ಹೆನ್ರಿ ಸಿಕ್ವೇರಾ, ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷ ಲೋಯ್ಡ್ ಲೋಬೋ, ಕಾರ್ಯದರ್ಶಿ ಸಿಲ್ವಿಯಾ ಮಸ್ಕರೇನಸ್, 21 ಆಯೋಗದ ಸಂಯೋಜಕ ಕೆವಿನ್ ಮಾರ್ಟಿಸ್ ಸೇರಿದಂತೆ ನೂರಾರು ಭಕ್ತಾದಿಗಳು ಹಾಜರಿದ್ದರು. ಡಿ.7ರ ವರೆಗೆ ನಾನಾ ವಿಷಯಗಳಲ್ಲಿ ಒಂಬತ್ತು ಧರ್ಮಗುರುಗಳ ನೇತೃತ್ವದಲ್ಲಿ ನವ ದಿನಗಳ ನೊವೆನಾಗಳು ಸಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು