7:28 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಕನ್ನಡ ಕಾರ್ಯಕ್ರಮ: ವಿವಿಧ ನೃತ್ಯ ಸ್ಪರ್ಧೆ

30/11/2024, 15:29

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಸತ್ಯವತಿ ಬಸವರಾಜು ಶುಭ ಹಾರೈಸಿದರು.
ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ ಗಳ ಮಾರಾಟದ ಜೊತೆಗೆ ಸಾಮಾಜಿಕ ಕಳಕಳಿ ಇರುವುದು ವಿಶೇಷ” ಎಂದರು.
ಈ ಕಾರ್ಯಕ್ರಮ ಸಂಧ್ಯಾ ಜಯರಾಮ್ ಅವರ ಸಹಯೋಗದಲ್ಲಿ ನಡೆಯಿತು . ಸಮಾರೋಪ ಸಮಾರಂಭದಲ್ಲಿ ಚಿತ್ರ ನಟ ಸ್ಮೈಲ್ ಶಿವು ಹಾಗೂ ಕಾಸಿಯಾದ ಗೌರವ ಕಾರ್ಯದರ್ಶಿ, ಉದ್ಯಮಿ ಸುರೇಶ್ ಎನ್. ಸಾಗರ್ ವೇದಿಕೆಯಲ್ಲಿದ್ದು, ವಿಜೇತರಿಗೆ ಬಹುಮಾನ ವಿತರಿಸಿದರು.

ಮುಳಿಯ ಪ್ರಬಂಧಕರಾದ ಎನ್.ಸುಬ್ರಮಣ್ಯ ಭಟ್, ಸಂಜೀವ, ಶಾಮ್, ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು