2:16 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಳಪೆ ಔಷಧ ಕೊಟ್ಟು ಸರಕಾರವೇ ಬಾಣಂತಿಯರ ಕೊಂದಿದೆ: ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆರೋಪ

01/12/2024, 16:14

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಳಪೆ ಗುಣಮಟ್ಟದ ಔಷಧ ನೀಡಿ ಸರ್ಕಾರವೇ ಬಾಣಂತಿಯರನ್ನು ಕೊಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಆರೋಪಿಸಿದ್ದಾರೆ.
ಬಾಣಂತಿಯರ ಸರಣಿ ಸಾವು ಸಂಭವಿಸದ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ಅವರು ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಪಶ್ಚಿಮ ಬಂಗಾ ಫಾರ್ಮಸ್ಯುಟಿಕಲ್‌ ’ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂದು ಗೊತ್ತಿದ್ದರೂ ಯಾರ ಒತ್ತಡದಲ್ಲಿ ಸರ್ಕಾರ ಅದನ್ನು ಖರೀದಿ ಮಾಡಿತು’ ಎಂದು ಪ್ರಶ್ನೆ ಮಾಡಿದರು.
ರಾಜ್ಯದಲ್ಲಿ 10 ತಿಂಗಳಲ್ಲಿ 111 ನವಜಾತ ಶಿಶುಗಳು ಮೃತಪಟ್ಟಿವೆ. ಬಳ್ಳಾರಿಯಲ್ಲಿ ನಾಲ್ವರು ಬಾಣಂತಿಯರು ಕೊನೆಯುಸಿರೆಳೆದಿದ್ದಾರೆ. ‌ಮೆಡಿಕಲ್ ಮಾಫಿಯಾದಿಂದ ಜನರಲ್ಲಿ ಆತಂಕ ಉಂಟಾಗಿದೆ. ಬಳ್ಳಾರಿಯಲ್ಲಿ ಐವಿ ದ್ರಾವಣ ನೀಡಿದ ಬಳಿಕ ಬಾಣಂತಿಯರಲ್ಲಿ ಬಹು ಅಂಗಾಂಗ ವೈಫಲ್ಯವಾಗಿದೆ. ಸರ್ಕಾರ ಖರೀದಿ ಮಾಡಿದ್ದ ಐವಿ ದ್ರಾವಣ ಔಷಧವಲ್ಲ ಬದಲಿಗೆ ಕೊಲೆ ಮಾಡುವ ರಾಸಾಯನಿಕವಾಗಿತ್ತು‌ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಪಶ್ಚಿಮ ಬಂಗಾ ಫರ್ಮಾಸ್ಯುಟಿಕಲ್‌’ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಪಟ್ಟದ್ದು ಎಂದು ಆರು ತಿಂಗಳ ಹಿಂದೆ ಔಷಧ ನಿಯಂತ್ರಕರು ಹೇಳಿದ್ದರು.
ಐವಿ ದ್ರಾವಣದ 92 ಬ್ಯಾಚ್‌ಗಳಲ್ಲಿ 23 ಬ್ಯಾಚ್ ಕಳಪೆ ಗುಣಮಟ್ಟದ್ದು ಎಂದು ಅವರು ವರದಿ ನೀಡಿದ್ದರು. ಕಳಪೆ ಗುಣಮಟ್ಟದ್ದು ಎಂದು ಗೊತ್ತಿದ್ದರೂ ಸರ್ಕಾರ ಯಾಕೆ ಖರೀದಿ ಮಾಡಿತು. ಈ ಔಷಧ ಬಳಸಲು ಅನುಮತಿ ನೀಡಿದ ಬಲಾಢ್ಯರು ಯಾರು. ಇದಕ್ಕೆ ಯಾರ ಚಿತಾವಣೆ ಇದೆ. ಈ ಔಷಧಿ ಕಂಪನಿಯ ಅನ್ಸಾರಿ ಎಂಬುವವರ ಸಂಚಿನಿಂದ ಔಷಧ ಒಳ ಬಂದಿದೆ. ಅನ್ಸಾರಿ ಬಂಧನವಾದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದರು.
ರಾಜ್ಯ ಸರ್ಕಾರ ಕೇವಲ ರೂ. 2 ಲಕ್ಷ ಪರಿಹಾರ ನೀಡಿದೆ. ಸರ್ಕಾರಕ್ಕೆ ಬಡವರ ಜೀವದ ಬೆಲೆ ಗೊತ್ತಿಲ್ಲವೇ. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕು ಎಂದೂ ಅವರು ಕೇಳಿದರು.
ಬಳ್ಳಾರಿಯಲ್ಲಿ ಇಷ್ಟಾಗಿದ್ದರೂ, ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕಾಣೆಯಾಗಿದ್ದಾರೆ. ಯಾರೊಬ್ಬರೂ ಜಿಲ್ಲಾಸ್ಪತ್ರೆಗೆ ಬಂದಿಲ್ಲ. ಸರ್ಕಾರದ ಮಂತ್ರಿಗಳು ರಾಜೀನಾಮೆ ಕೊಡಬೇಕು. ರಾಜ್ಯದಲ್ಲಿ ಈ ವರ್ಷ ಇಲ್ಲಿವರೆಗೆ ಸಂಭವಿಸಿರುವ 28 ಬಾಣಂತಿಯರ ಸಾವಿನ ಕುರಿತು ಲೋಕಾಯುಕ್ತ ತನಿಖೆ ನಡೆಯಬೇಕು. ಇಲ್ಲದಿದ್ದಲ್ಲಿ ವಿರೋಧ ಪಕ್ಷದ ನಾಯಕನಾಗಿ ನಾನೇ ಲೋಕಾಯುಕ್ತರಿಗೆ ದೂರು ನೀಡುವೆ ಎಂದು ಎಚ್ಚರಿಸಿದರು.
ರೈತರು, ಅಧಿಕಾರಿಗಳಿಗೆ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡುತ್ತಿದ್ದರೆ, ನವಜಾತ ಶಿಶುಗಳಿಗೆ ಮತ್ತು ಬಾಣಂತಿಯರಿಗೆ ಸಾವಿನ ಭಾಗ್ಯ ಕರುಣಿಸುತ್ತಿದೆ. ಪರಿಸ್ಥಿತಿ ಹೀಗಿದ್ದರೂ, ಈಗ ಹಾಸನದಲ್ಲಿ ಸಮಾವೇಶ ಮಾಡುತ್ತಿರುವುದು ಯಾವ ಪುರಾಷರ್ಥಕ್ಕಾಗಿ. ಜನರು ಇನ್ನು ಮುಂದೆ ಎರಡು ಸಾವಿರ ರೂಪಾಯಿ ಬೇಡ, ಆರೋಗ್ಯ ಭಾಗ್ಯ ಕೊಡಿ ಎಂದು ಕೇಳುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು