6:11 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು