5:54 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ?: ಸುನೀಲ್ ಕುಮಾರ್ ಬಜಾಲ್ ಪ್ರಶ್ನೆ

05/12/2024, 22:16

ಮಂಗಳೂರು(reporterkarnataka.com):ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಅವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದ್ದಾರೆ.
ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, ಮಸಾಜ್ ಪಾರ್ಲರ್ ನಂತಹ ಅಕ್ರಮ ಚಟುವಟಿಕೆಗಳು ಮಂಗಳೂರು ನಗರಾದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದರೂ ಅದರ ವಿರುದ್ದ ಚಕಾರ ಶಬ್ದವೆತ್ತದ ಕಮಿಷನರ್ ಜನಪರ ಹೋರಾಟಗಳನ್ನೇ ಹತ್ತಿಕ್ಕಲು ಮುಂದಾಗಿರುವುದು ಪೋಲಿಸ್ ರಾಜ್ಯವನ್ನು ನಿರ್ಮಿಸಲು ಹೊರಟಂತಿದೆ ಎಂದು
ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ,
ಯುವಜನರು ಗಾಂಜಾ ಅಫೀಮಿಗೆ ಬಲಿಯಾಗಿ ಅಕ್ರಮಕೂಟಗಳ ಕಾಲಾಳುಗಳಾಗಿ ದುಡಿದು ಮನೆ ಸೇರದ ಕೊರಗಿಗೆ ಅವರ ಹೆತ್ತ ಕರುಳು ನೆಮ್ಮದಿಯಿಂದ ಮಲಗುವ ದಿನಗಳನ್ನು ಮರೆತಿದ್ದಾರೆ. ಸಭಾಪತಿಗಳು ತಮ್ಮ ಜವಾಬ್ದಾರಿ ಮರೆತ ಕಾರಣ ಉಳ್ಳಾಲದ ಜನ ಮೂಲಭೂತ ಸೌಕರ್ಯಗಳಿಲ್ಲದೆ ಮಲಗಲಾಗದ ಸ್ಥಿತಿ ಎದುರಿಸುತ್ತಿದ್ದಾರೆ. ಕೂಡಲೇ ಕಮೀಷನರ್ ಅಗ್ರವಾಲ್ ಅವರನ್ನು ವರ್ಗಾಹಿಸಲು ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೊಟ್ಟು, ಹಿರಿಯ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ, ವಿಲಾಸಿನಿ ತೊಕ್ಕೊಟ್ಟು, ಪ್ರಮೋದಿನಿ, ರಮೇಶ್ ಉಳ್ಳಾಲ, ಶೇಕರ್ ಕುಂದರ್, ರಫೀಕ್ ಹರೇಕಳ,ಜನಾರ್ಧನ ಕುತ್ತಾರ್,ಚಂದ್ರಹಾಸ ಪಿಲಾರ್,ರೋಹಿದಾಸ್, ಪದ್ಮನಾಭ ಕುಂಪಲ, ಡಿವೈಎಫ್ಐ ಮುಖಂಡರುಗಳಾದ ಅಸ್ಫಕ್ ಅಲೇಕಳ, ರಝಾಕ್ ಮುಡಿಪು, ರಝಾಕ್ ಮೊಂಟೆಪದವು, ಅಶ್ರಫ್ ಹರೇಕಳ, ಅಮೀರ್ ಉಳ್ಳಾಲಬೈಲ್, ನವೀಝ್, ದಿವ್ಯರಾಜ್ ಕುತ್ತಾರ್ , ಸುನೀಲ್ ತೇವುಲ, ಇಕ್ಭಾಲ್ ಹರೇಕಳ, ಸರ್ಫರಾಝ್ ಗಂಡಿ ಮುಂತಾದವರು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷರಾದ ನಿತಿನ್ ಕುತ್ತಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ರಿಝ್ವಾನ್ ಹರೇಕಳ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು