5:50 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಆಪೊಸ್ತಲಿಕ್ ಕಾರ್ಮೆಲ್ ಸಭೆಯ 10 ಸಹೋದರಿಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿ ಸಂಭ್ರಮ

08/12/2024, 23:48

ಮಂಗಳೂರು(reporterkarnataka.com):ಆಪೊಸ್ತಲಿಕ್ ಕಾರ್ಮೆಲ್ ಸಭೆಯ ಹತ್ತು ಕನ್ಯಾ ಸ್ತ್ರೀಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿಯು ಡಿಸೆಂಬರ್ 7 ರಂದು ನಗರದ ಮೇರಿಹಿಲ್ ಕಾನ್ವೆಂಟ್ ನಲ್ಲಿ ನೆರವೇರಿತು.
ಮಂಗಳೂರಿನ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇತರ ಸಹ ಧರ್ಮ ಗುರುಗಳ ಜೊತೆಗೂಡಿ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದರು. ಹತ್ತು ಯುವ ಕನ್ಯಾ ಸ್ತ್ರೀಯರು ಆಪೊಸ್ತಲಿಕ್ ಕಾರ್ಮೆಲ್ ನ ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿ ಎ.ಸಿ. ಮತ್ತು ಇತರ ಧರ್ಮ ಭಗಿನಿಯರ ಸಮ್ಮುಖದಲ್ಲಿ, ಪರಿಶುದ್ಧತೆ, ಬಡತನ ಮತ್ತು ವಿಧೇಯತೆಯ ಪ್ರತಿಜ್ನೆಯ ಮೂಲಕ ತಮ್ಮನ್ನು ಸಂಪೂರ್ಣವಾಗಿ ಮತ್ತು ಶಾಶ್ವತವಾಗಿ ಯೇಸು ಸ್ವಾಮಿಗೆ ಸಮರ್ಪಿಸಿದರು.


ತದ ನಂತರ ಮೌಂಟ್ ಕಾರ್ಮೆಲ್ ಶಾಲಾ ಸಭಾಂಗಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮವು ಶಾಲೆಯ ವಿದ್ಯಾರ್ಥಿಗಳ ಸ್ವಾಗತ ನ್ರತ್ಯದೊಂದಿಗೆ ಪ್ರಾರಂಭವಾಯಿತು. ನವಶಿಷ್ಯರ ಶುಭಾಶಯ ಗೀತೆ ಎಲ್ಲರನ್ನು ಹರ್ಷಗೊಳಿಸಿತು. ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿಯವರು ಯುವ ಕನ್ಯಾ ಸ್ತ್ರೀಯರಿಗೆ ಹಾರ ಹಾಕಿ ಅಭಿನಂದಿಸಿದರು. ಅವರು ತಮ್ಮ ಭಾಷಣದಲ್ಲಿ, ದೇವರ ಬೇಷರತ್ತಾದ ಪ್ರೀತಿಗೆ ಸಮರ್ಪಿಸಿದ ಸಹೋದರಿಯರನ್ನು ಉದ್ದೇಶಿಸಿ ದೇವರ ಪ್ರೀತಿಯಲ್ಲಿ ಸದಾ ಬದ್ದರಾಗಿರಲು ಸಲಹೆ ನೀಡಿದರು ಮತ್ತು ಈ ಸಹೋದರಿಯರ ಪೋಷಕರು ಮತ್ತು ಕುಟುಂಬದ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಈ ಸಂಭ್ರಮಾಚರಣೆಯಲ್ಲಿ ಆಪೊಸ್ತಲಿಕ್ ಕಾರ್ಮೆಲ್ ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿ ಎ.ಸಿ., ಇವರೊಂದಿಗೆ ಪ್ರಾಂತೀಯ ಪದಾಧಿಕಾರಿಗಳು,, ಭಾರತ ಮತ್ತು ಶ್ರೀಲಂಕಾದಿಂದ ಆಗಮಿಸಿದ ಕುಟುಂಬದ ಸದಸ್ಯರು, ಹಿತೈಷಿಗಳು, ಧರ್ಮ ಗುರುಗಳು, ಹಲವಾರು ಧರ್ಮ ಭಗಿನಿಯರು ಉತ್ಸಾಹದಿಂದ ಭಾಗವಹಿಸಿದರು ಮತ್ತು ಶಾಶ್ವತ ಪ್ರತಿಜ್ನೆ ಮಾಡಿದ ಭಗಿನಿಯರನ್ನು ಅಭಿನಂದಿಸಿದರು. ಕೊನೆಯಲ್ಲಿ ಸಹಭಾಗಿತ್ವದ ಭೋಜನವು ಎಲ್ಲರನ್ನು ಒಂದುಗೂಡಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು