12:28 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ; ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

09/12/2024, 21:32

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆಯು ಭಾನುವಾರ ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.
ಬೆಳಿಗ್ಗೆ 6ರಿಂದ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಮಧ್ಯಾಹ್ನ 1 ಗಂಟೆಯಿಂದ ವಿಜಯ ಭಾಸ್ಕರ್ ಮತ್ತು ಗಣೇಶ್ ಮಂಗಳೂರು ಅವರಿಂದ “ಭಕ್ತಿಗಾನ ಸುಧೆ” ಸಂಜೆ 4 ಗಂಟೆಯಿಂದ “ಸ್ಪೂರ್ತಿ ಮಹಿಳಾ ಭಜನಾ ಮಂಡಳಿ” ಪದವಿನಂಗಡಿ ಮತ್ತು ಶ್ರೀ ನಾರಾಯಣಗುರು ಸೇವಾಸಂಘ, ಮೇರಿಹಿಲ್, ಗುರುನಗರ ಅವರಿಂದ ” ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಿತು.
ಸಂಜೆ 7 ಗಂಟೆಗೆ ಅಗೆಲು ಸೇವೆ ನಡೆದು, ಬಳಿಕ ಅನ್ನಸಂತರ್ಪಣೆ ನೆರವೇರಿತು.


ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಕಮಲಾದೇವಿ ಅಸ್ರಣ ಅವರು ಆಶೀರ್ವಚನ ನೀಡಿದರು. ನಿರೂಪಕ ನವನೀತ್ ಶೆಟ್ಟಿ ಕದ್ರಿ, ಉದ್ಯಮಿಗಳಾದ ಲೀಲಾಕ್ಷ ಕರ್ಕೇರಾ, ಎಂ. ಅಶೋಕ್ ಶೇಟ್, ಲಚ್ಚು ಲಾಲ್, ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು