12:50 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಪಾಪದ ಪ್ರಾಯಶ್ಚಿತದಿಂದ ಉತ್ತಮ ನಡತೆ ರೂಡಿಸಿಕೊಳ್ಳಿ: ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ಮಂಗಳೂರು ಬಿಷಪ್

10/12/2024, 16:01

ಮಂಗಳೂರು(reporterkarnataka.com):ಮೇರಿ ಮಾತೆ ಪ್ರೀತಿಯಿಂದ ಬರಮಾಡಿಕೊಳ್ಳುವ ಜತೆಗೆ ತನ್ನ ದಯೆಯನ್ನು ಎಲ್ಲರಿಗೂ ನೀಡುತ್ತಾ ಪೋಷಿಸುತ್ತಾರೆ. ಇದಕ್ಕಾಗಿ ನಾವು ಪಾಪದ ಪ್ರಾಯಶ್ಚಿತ ಮಾಡುವ ಮೂಲಕ ಉತ್ತಮ ನಡತೆಯನ್ನು ರೂಡಿಸಿಕೊಳ್ಳುವ ಅಗತ್ಯವಿದೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಪಷ್ ಡಾ.ಪೀಟರ್ ಪಾವ್ಲ್ ಸಲ್ಡಾನ ಹೇಳಿದರು.


ಅವರು ಭಾನುವಾರ ನಗರದ ಲೇಡಿಹಿಲ್‍ನ ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬದ ಸಂಭ್ರಮದ ಕೃತಜ್ಞತಾ ಪೂಜೆಯಲ್ಲಿ ಪ್ರವಚನ ನೀಡುತ್ತಾ, ದೇವರು ಎಂದಿಗೂ ಬಲಪ್ರಯೋಗಕ್ಕೆ ಇಳಿಯುವುದಿಲ್ಲ. ಭಕ್ತರು ದೇವರಲ್ಲಿ ಪ್ರಾರ್ಥನೆ ಮೂಲಕ ವಿನಂತಿಸಿಕೊಂಡಾಗ ಮಾತ್ರ ಅವರು ತಮ್ಮ ದಯೆಯನ್ನು ತೋರಿಸುತ್ತಾರೆ. ಮನುಷ್ಯರು ಸದಾ ಕಾಲ ಪಾಪದ ಕಡೆಗೆ ವಾಲುತ್ತಾರೆ ಆದರೆ ದೇವರ ಆಧಾರ ಇದ್ದಾಗ ಮಾತ್ರ ಈ ಪಾಪದ ಕೂಪದಿಂದ ಹೊರಬಂದು ಉತ್ತಮ ಸನ್ನಡತೆಯನ್ನು ರೂಡಿಸಿಕೊಳ್ಳಲು ಸಾಧ್ಯವಿದೆ ಎಂದರು.
ಇಟಲಿಯ ಪೊಂಪೈ ನಗರದಲ್ಲಿ ಪೊಂಪೈ ಮಾತೆಯ ಭಕ್ತಿ ಪ್ರಸಾರ ಮಾಡಲು ಬಾರ್ತಾಲೊ ಲೊಂಗೋ ಕಾರಣಕರ್ತನಾದ. ಇದೇ ರೀತಿಯಲ್ಲಿ ನಿರಂತರ ದೇವರ ಪ್ರಾರ್ಥನೆಯ ಮೂಲಕ ಮನಸ್ಸಿನಲ್ಲಿರುವ ಕಂದಕಗಳನ್ನು ನಿವಾರಿಸಿಕೊಂಡು ನಾವು ಉತ್ತಮ ಜೀವನವನ್ನು ನಡೆಸುವ ಮೂಲಕ ಲ್ಲರಿಗೂ ಒಳಿತನ್ನು ಮಾಡುವಂತಾಗರಬೇಕು ಎಂದರು.
ವಿಶೇಷ ಅರಾಧನಾ ವಿಧಿಯನ್ನು ಮಂಗಳ ಜ್ಯೋತಿ ಸಂಸ್ಥೆಯ ನಿರ್ದೇಶಕ ಫಾ. ವಿಜಯ್ ಮಚಾದೋ ನಡೆಸಿಕೊಟ್ಟರು. ಈ ಸಂದರ್ಭ ಉರ್ವ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ, ಅಶೋಕನಗರ ಸಂತ ಡಾಮಿನಿಕ್ ಚರ್ಚಿನ ಪ್ರಧಾನ ಧರ್ಮಗುರು ಫಾ.ಡೇನಿಯಲ್ ಸಂಪತ್ ವೇಗಸ್, ಉರ್ವ ಚರ್ಚಿನ ಫಾ. ಹೆನ್ರಿ ಸಿಕ್ವೇರಾ, ಸಹಾಯಕ ಧರ್ಮ ಗುರು ಫಾ. ಲ್ಯಾನ್ಸನ್ ಪಿಂಟೋ ಸೇರಿದಂತೆ ಸುತ್ತಮುತ್ತಲಿರುವ ಚರ್ಚ್‍ಗಳ ಸರಿಸುಮಾರು 60ಕ್ಕೂ ಅಧಿಕ ಧರ್ಮಗುರುಗಳು ಕೃತಜ್ಞತಾ ಪೂಜೆಯಲ್ಲಿ ಭಾಗವಹಿಸಿದ್ದರು. ಸಾವಿರಕ್ಕೂ ಅಧಿಕ ಮಂದಿ ಭಕ್ತರು ಈ ಸಂಭ್ರಮದ ಕೃತಜ್ಞತಾ ಪೂಜೆಯಲ್ಲಿ ಭಾಗವಹಿಸಿ ಧನ್ಯರಾದರು. ಪೂಜೆಯ ಬಳಿಕ ಪರಮ ಪ್ರಸಾದದ ಮೆರವಣಿಗೆ ಉರ್ವ ಚರ್ಚಿನ ಮೂಲಕ ಉರ್ವ ಮಾರ್ಕೆಟ್, ಗಾಂಧಿನಗರ, ಮಣ್ಣಗುಡ್ಡೆ, ಲೇಡಿಹಿಲ್ ಸರ್ಕಲ್ ಮೂಲಕ ಉರ್ವ ಚರ್ಚ್‍ಗೆ ಮತ್ತೆ ಬರಲಾಯಿತು. ಈ ಬಳಿಕ ಸಾವಿರಾರು ಮಂದಿ ಭಕ್ತರು ಪರಮ ಪ್ರಸಾದದ ಆಶೀರ್ವಾದವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು