4:55 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕುಂಭಮೇಳ: ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರ

25/12/2024, 19:14

ಬೆಂಗಳೂರು(reporterkarnataka.com): ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು