3:42 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವ ಮಾತಾ ಚರ್ಚ್‌ ನಲ್ಲಿ ಸಂಭ್ರಮದ ಹೊಸ ವರ್ಷದ ಬಲಿಪೂಜೆ

03/01/2025, 15:55

ಬಂಟ್ವಾಳ(reporterkarnataka.com): 250 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ತಿಗೊಳಿಸಿ ಸಂಭ್ರಮಾಚರಣೆಯಲ್ಲಿರುವ ಬಂಟ್ವಾಳ ತಾಲೂಕಿನ ಮೊಗರ್ನಾಡು ದೇವ ಮಾತಾ ಚರ್ಚ್‌ ನಲ್ಲಿ ಹೊಸ ವರ್ಷದ ಬಲಿ ಪೂಜೆ ಸಂಭ್ರಮದಿಂದ ನಡೆಯಿತು.
ಬಲಿಪೂಜೆಯ ನೇತೃತ್ವವನ್ನು ಆಸ್ಟ್ರೇಲಿಯಾದ ಅತಿ ವಂದನೀಯ ಮೊನ್ಸಿಂಜೋರ್‌ ಆಲ್ಫ್ರೆಡ್‌ ರಾಯನ್‌ ಡಿ’ಸೋಜಾ ಅವರು ವಹಿಸಿ ಮೇರಿ ಮಾತೆ ದೇವ ಮಾತೆ ಆಗಿದ್ದರಿಂದ ಅವರು ನಮ್ಮೆಲ್ಲರ ಮಾತೆ. ಅವರ ಆದರ್ಶ ನಮಗೆ ದಾರಿದೀಪವಾಗಿದೆ ಎಂದರು. ಬಲಿಪೂಜೆಯಲ್ಲಿ ಚರ್ಚ್ ನ ಪ್ರಧಾನ ಧರ್ಮ ಗುರು ವಂದನೀಯ ಫಾ. ಅನಿಲ್‌ ಕೆನ್ಯೂಟ್‌ ಡಿ’ಮೆಲ್ಲೊ ಅವರು ಭಾಗವಹಿಸಿ ಭಕ್ತರಿಗೆ ಹೊಸ ವರ್ಷದ ಶುಭಾಶಯ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂತೋಷ್‌ ಡಿ’ ಸೋಜಾ, ಕಾರ್ಯದರ್ಶಿ ವಿಲ್ಫ್ರೆಡ್‌ ಲೋಬೊ, ಆಯೋಗಗಳ ಸಂಯೋಜಕಿ ಎಮಿಲಿಯಾ ಡಿ’ ಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು