3:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

09/01/2025, 10:47

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು.


ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀನು ಖರೀದಿಸಿ ಭೂಮಿಯ ಒಡೆತನವನ್ನು ನೀಡಿದೆ.
ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕರು ಪ್ರತಿಯೊಬ್ಬರಿಗೂ ಸ್ವಂತ ಸೂರು ಹೊಂದುವ ಆಕಾಂಕ್ಷೆ ಇರುತ್ತದೆ. ನಿಮ್ಮ ಸಮಸ್ಯೆ ಕುರಿತಾಗಿ ಪಾಲಿಕೆ ಸದಸ್ಯರಲ್ಲಿ ತಿಳಿಸಿ ಹಕ್ಕು ಪತ್ರಕ್ಕೆ ಮನವಿ ಮಾಡಿದ ಮೇರೆಗೆ ಖಾಸಗೀ ಜಮೀನು ಖರೀದಿಸಲು ಸೂಚಿಸಿ ಅದರಂತೆ ನೀವು ವಾಸ ಮಾಡುತ್ತಿದ್ದ ಜಾಗ ನಿಮ್ಮದಾಗಿದೆ.ಅ„ಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ .ನಿಮ್ಮ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದರು.
ಮೇಯರ್ ಮನೋಜ್ ಕುಮಾರ್ ,ವಿಪಕ್ಷ ನಾಯಕ ಅನಿಲ್ ಕುಮಾರ್ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಉಪ ಮೇಯರ್ ಬಾನುಮತಿ, ಸ್ಥಾಯೀ ಸಮಿತಿ ಸದಸ್ಯರಾದ ವೀಣಾ ಮಂಗಳ, ಸುಮಿತ್ರ ಕರಿಯ, ಸರಿತ ಶಶಿಧರ್,ಶ್ವೇತ ಪೂಜಾರಿ, ನಯನ ಆರ್ ಕೋಟ್ಯಾನ್, ವೇದಾವತಿ, ಲಕ್ಷ್ಮೀ ಶೇಖರ್ ದೇವಾಡಿಗ, ವರುಣ್ ಚೌಟ,ಶೋಭಾ ರಾಜೇಶ್,ಪಾಲಿಕೆ ಅ„ಕಾರಿಗಳಾದ ವಿಭಾಗೀಯ ಆಯುಕ್ತ ಗುರುಪ್ರಸಾದ್, ಚಿತ್ತರಂಜನ್, ಮಾಲಿನಿ ರೋಡ್ರಿಗಸ್,ಸುಲತ,ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು