10:46 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು