5:09 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ನಂಜನಗೂಡು: ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ವೈಕುಂಠ ವೈಭವ

11/01/2025, 23:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲ ಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.
ನಿನ್ನೆಯಿಂದಲೇ ದೇವಾಲಯದಲ್ಲಿ ಹೋಮ ಹವನಗಳು ನಡೆದು ಶುಕ್ರವಾರ ಬೆಳಿಗ್ಗೆಯಿಂದಲೇ ಶ್ರೀ ಅಲಮೇಲು ಮಂಗಮ್ಮ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಅವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನಡೆಸಲಾಯಿತು.
ದೇವಾಲಯಕ್ಕೆ ಹುಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.


ಇದೇ ಸಂದರ್ಭ ದೇವಾಲಯದ ವತಿಯಿಂದ ನಿರ್ಮಿಸಲಾಗಿದ್ದ ವೈಕುಂಠ ದ್ವಾರವನ್ನು ಪ್ರವೇಶಿಸಿ ಸುವ ಮೂಲಕ ವೈಕುಂಠ ಏಕಾದಶಿಯನ್ನು ಏಕಾಗ್ರತೆಯಿಂದ ಆಚರಿಸಿದ ಭಕ್ತರು ಶ್ರೀ ವೆಂಕಟೇಶ್ವರನಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ಒಳ ಹಾಗೂ ಹೊರ ಆವರಣಗಳನ್ನು ಬಣ್ಣ ಬಣ್ಣದ ಹೂ ಹಾಗು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕಾರಿಕಲಾಗಿತ್ತು.
ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಲಾಡು ಸೇರಿದಂತೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಸಂಸ್ಥಾಪಕ ಸದಸ್ಯರಾದ ವಕೀಲ ಶ್ರೀನಿವಾಸ ರೆಡ್ಡಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ದೇವಾಲಯದ ಸಂಸ್ಥಾಪಕರಾದ ಶ್ರೀ ವಿಜಯಲಕ್ಷ್ಮಿ, ನಾರಾಯಣ ರೆಡ್ಡಿ, ಡಾ.ಕುಮಾರ್, ಸೇರಿದಂತೆ ಕುಟುಂಬ ವರ್ಗದವರು ಹಾಗೂ ಪುರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು