6:52 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕೋಲಾರ: ಕರ್ನಾಟಕ- ಆಂಧ್ರ ಲಿಂಕ್ ರಸ್ತೆ ಕಾಮಗಾರಿಗೆ ಜಂಟೀ ಚಾಲನೆ

12/01/2025, 15:35

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಾಜ್ಯದಿಂದ ಆಂಧ್ರ ಪ್ರದೇಶದ ಬಿ.ಕೊತ್ತಕೋಟ, ಮದನಪಲ್ಲಿಗೆ ಹೋಗುವ ರಸ್ತೆಯು ಆಂಧ್ರದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಲಿದ್ದು ಮದನಪಲ್ಲಿ ಶಾಸಕರು ಅರಣ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಲಿಂಕ್ ರಸ್ತೆಗೆ ವ್ಯವಸ್ಥೆ ಮಾಡುತ್ತಿದ್ದು ಮದನಪಲ್ಲಿ ಶಾಸಕರಿಗೆ ಶಾಸಕ ಜಿ.ಕೆ.ವೆಂಕಟಶಿವಾ ರೆಡ್ಡಿ ಕೃತಜ್ಞತೆ ಸಲ್ಲಿಸಿದರು.
ತಾಲೂಕಿನ ರಾಯಲ್ಪಾಡು ಹೋಬಳಿಯ ಮುದಿಮಡುಗು ಸಮೀಪದ ಆಂಧ್ರದ ಮೊರಂಕಿಂದಪಲ್ಲಿ ಗ್ರಾಮದಲ್ಲಿ ಶನಿವಾರ ರಾಜ್ಯ , ಆಂಧ್ರ ರಸ್ತೆಗೆ ಕಾಮಗಾರಿಗೆ ಜಂಟಿಯಾಗಿ ಚಾಲನೆ ನೀಡಿ ಮಾತನಾಡಿದರು.
ಅಲ್ಲದೆ ರಾಜ್ಯ ನೆರ ಹೊರೆಯ ಗ್ರಾಮಗಳಲ್ಲಿ ಬಾಂಧವ್ಯ, ಬಾವ ಬೆಸೆಗೆ ಸಂಬಂದವಿದೆ ರಾಜ್ಯದ ೨-೫೦ ಕಿಲೋಮೀಟರ್ ರಸ್ತೆ ಕಾಮಗಾರಿ ಮಾಡಬೇಕಾಗಿದ್ದು ರಾಜ್ಯ ಮತ್ತು ಆಂಧ್ರ ಪ್ರದೇಶಕ್ಕೆ ಲಿಂಕ್ ರಸ್ತೆಯನ್ನು ವ್ಯವಸ್ಥೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ ಎಂದರು.
ಮದನಪಲ್ಲಿ ಶಾಸಕ ಷಹಜಾನಪಾಷ ಮಾತನಾಡಿ ರಸ್ತೆ ಇತರೆ ಮೂಲ ಭೂತ ಸೌಲಭ್ಯಗಳ ಕೊರತೆಯಿಂದ ನಾಗರೀಕರು ಬೇಸರಿಸುತ್ತಿದ್ದು ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ನಾವಿಬ್ಬರೂ ಸೇರಿ ಸರಿಪಡಿಸುವ ನಿಟ್ಟಿನಲ್ಲಿ ಕೈಜೋಡಿಸುತ್ತಿದ್ದೇವೆ ಎಂದರು.
ಗ್ರಾಮೀಣ ಭಾಗದ ಬಡಜನರಿಗೆ ತರಕಾರಿ ಹಣ್ಣು ಹಂಪರು ಸರಬರಾಜು ಮಾಡಲು ಮತ್ತು ರೈತರಿಗೆ ಅನುಕೂಲವಾಗುವಂತೆ ಈ ರಸ್ತೆ ನಿರ್ಮಿಸಲಾಗುತ್ತಿದೆ
ಎಂದು ಹೇಳಿದರು.
ಜಿಪಂ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ತಾಪಂ ಮಾಜಿ ಸದಸ್ಯರಾದ ಮಂಜುನಾಥ ರೆಡ್ಡಿ, ರಾಜಶೇಖರ ರೆಡ್ಡಿ, ಮುದಿಮಡುಗು ಗ್ರಾಮ ಪಂಚಾಯತಿ ಸದಸ್ಯ ಎಲ್.ರಾಜೇಶ್, ಆ‌ರ್.ಐ. ಶಂಕರ ರೆಡ್ಡಿ, ಜಿಲ್ಲಾ ಪಂಚಾಯತ್ ಇಂಜಿನಿಯರ್, ಕೃಷ್ಣಪ್ಪ,ವಾಟರ್ ಬೋರ್ಡ್ ಇಂಜಿನಿಯರ್ ಸಂತೋಷ್, ಸರ್‌ಪಂಚ್ ಆನಂದ ರೆಡ್ಡಿ, ಮಂಡಲ್ ಅಧ್ಯಕ್ಷ ಈಶ್ವರ್, ಮುಖಂಡ ವೇಣು, ಜಯಣ್ಣ, ನಾಗೇಶ್ ,ರಾಜ್ಯ ಆಂಧ್ರದ ಪಂಚಾಯಿತ್ ರಾಜ್, ಕಂದಾಯ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು