3:49 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶ್ರೀ ವೆಂಕಟ್ರಮಣ ದೇವರ ನೂತನ ಚಂದ್ರ ಮಂಡಲ ವಾಹನ ಹಸ್ತಾಂತರ

19/01/2025, 21:44

ಮಂಗಳೂರು(reporterkarnataka.com): ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಇಂದು ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ನಡೆಯಿತು.
ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ​ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು .
ಜನವರಿ 20 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ . ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ ಪ್ರಯುಕ್ತ ಆಯೋಜಿಸಲಾದ ಶ್ರೀ ಗುರು ಪಾದುಕಾ ಯಾತ್ರೆಯ ಪುರಪ್ರವೇಶ ಹಾಗೂ ಮಂಗಳೂರು ರಥೋತ್ಸವ ಪ್ರಯುಕ್ತ ಶ್ರೀ ದೇವಳಕ್ಕೆ ಆಗಮಿಸಲಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಂದು ರಾತ್ರಿ 7 ಗಂಟೆಗೆ ಸರಿಯಾಗಿ ಡೊಂಗರಕೇರಿಯಲ್ಲಿರುವ ಕೆನರಾ ಹೈ ಸ್ಕೂಲ್ ಬಳಿಯಿಂದ ಮೆರವಣಿಗೆ ಹೊರತು ಡೊಂಗರಕೇರಿ , ನ್ಯೂ ಚಿತ್ರಾ ಜಂಕ್ಷನ್ ಮೂಲಕ ಬಿ . ಎಂ . ಹೈಸ್ಕೂಲ್ ರಸ್ತೆ , ರಥಬೀದಿ ಮೂಲಕ ಶ್ರೀ ದೇವಳಕ್ಕೆ ಭವ್ಯ ಮೆರವಣಿಗೆ ತಲುಪಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು