1:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

1 ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ರೆಕಾರ್ಡ್: ಬಾಲಕಿ ಫಾತಿಮಾ ನಜಫ್ ರಿಗೆ ಸನ್ಮಾನ

20/01/2025, 20:25

ಸುರತ್ಕಲ್(reporterkarnataka.com): ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ಅವರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ್ರದ ಉಂಗುರ ಕೊಟ್ಟು ಸನ್ಮಾನಿಸಲಾಯಿತು.


ಈ ವೇಳೆ ಸುರತ್ಕಲ್ ಠಾಣಾಧಿಕಾರಿ ರಘು ನಾಯಕ ಅವರು ಬಾಲಕಿಯನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತಾಡಿದ ಅವರು, ಶಿಕ್ಷಣದ ಜೊತೆಗೆ ಮಕ್ಕಳು ಬಾಲ್ಯದಲ್ಲೇ ಇಂತಹ ಸಾಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಈ ಮೂಲಕ ಹೆತ್ತವರು, ಸಮಾಜದ ಹೆಸರನ್ನು ಎಲ್ಲರೂ ಗುರುತಿಸುವಂತೆ ಮಾಡಬೇಕು. ಬಾಲಕಿಯ ಸಾಧನೆಗೆ ಎಲ್ಲರೂ ಬೆನ್ನುತಟ್ಟಿ ಪ್ರೋತ್ಸಾಹಿಸೋಣ ಎಂದರು.
ಬಳಿಕ ಮಾತಾಡಿದ ಫಾತಿಮಾ ನಜಫ್, ನಾನು ಅಡ್ಡೂರಿನ ಸಹಾರ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ 6ನೇ ತರಗತಿ ಕಲಿಯುತ್ತಿದ್ದೇನೆ. ನನ್ನ ಸಾಧನೆಗೆ ಹೆತ್ತವರು, ಶಾಲಾ ಶಿಕ್ಷಕರ ಸಹಕಾರ ತುಂಬಾ ಇದೆ. ಅವರಿಗೆ ನಾನು ಧನ್ಯವಾದವನ್ನು ಅರ್ಪಿಸುತ್ತೇನೆ ಎಂದರು.
ಅಟ್ಲಾಸ್ ಜ್ಯುವೆಲ್ಲರಿಯ ವ್ಯವಸ್ಥಾಪಕರಾದ ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು