3:42 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡು: ಶಕ್ತಿ ದೇವತೆ ಶ್ರೀ ಚಿಕ್ಕಮ್ಮದೇವಿ ಅಮ್ಮನವರ ಜಾತ್ರಾ ಮಹೋತ್ಸವ

05/02/2025, 21:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವ ವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾ ಪೂಜೆ, ಕಳಸ ಪೂಜೆಯೊಂದಿಗೆ ದೇವಾಲಯದಿಂದ ಹೊರ ತಂದ ಅಲಂಕೃತ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಹೆಣ್ಣು ಮಕ್ಕಳಿಂದ ತಂದ ಹಾಲರವಿ ಉತ್ಸವಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಚಿಕ್ಕರಂಗನಾಯಕ ಚಾಲನೆ ನೀಡಿದರು.


ತಮಟೆ, ಕಂಸಾಳೆ ಹಾಗೂ ಮಂಗಳವಾದ್ಯ ಸೇರಿದಂತೆ ಛತ್ರಿ ಚಾಮರ, ಸತ್ತಿಗೆ, ಸುರಪಾನಿಗಳೊಂದಿಗೆ ಶ್ರೀ ಅಮ್ಮನವರ ಹಾಲರವಿ ಹಾಗೂ ಉತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಉತ್ಸವದಲ್ಲಿ ಪಾಲ್ಗೊಂಡ ದೇವರ ಗುಡ್ಡಪ್ಪ ಅವರಿಗೆ ಗ್ರಾಮದ ಪ್ರತಿಯೊಬ್ಬ ಮನೆಯವರು ನೀರು ಊಯ್ದು ಅರಿಶಿನ ಕುಂಕುಮ ಹಚ್ಚಿ ವಿಶಿಷ್ಟವಾಗಿ ಪೂಜೆ ಸಲ್ಲಿಸಲಾಗುತ್ತಿತ್ತು.ಬಂದ ಎಲ್ಲಾ ಭಕ್ತರಿಗೆ ಗ್ರಾಮಸ್ಥರಿಂದ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
ಬಳಿಕ ಗ್ರಾಮದ ಹಾಗೂ ಬಿಜೆಪಿ ಮುಖಂಡ ಚಿಕ್ಕರಂಗನಾಯಕ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ತಾಯಿಯು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಾಂತರಾಜು, ಸದಸ್ಯರಾದ ಗೋವಿಂದರಾಜು, ಮಾಜಿ ಸದಸ್ಯ ಚಿಕ್ಕಣ್ಣ, ಯಜಮಾನ್ ಚಿನ್ನಸ್ವಾಮಿ, ಮರಿಗಂಡ ನಾಯಕ ಸೇರಿದಂತೆ ನಾಯಕ ಜನಾಂಗದ ಕುಲಬಾಂಧವರು, ಯಜಮಾನರುಗಳು, ಮುಖಂಡರು ಸೇರಿದಂತೆ ಚಿಕ್ಕ ರಂಗನಾಯಕ್ ಅಭಿಮಾನಿ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು