5:54 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Air India Express | ಮಂಗಳೂರಿನಿಂದ ಹೈದರಾಬಾದ್, ಚೆನ್ನೈಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್: ಏ. 2 ಮತ್ತು 5ರಿಂದ ಹಾರಾಟ ಶುರು

27/03/2025, 19:25

ಮಂಗಳೂರು(reporterkarnataka.com): ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ (ಬುಧವಾರ) ಮತ್ತು ಚೆನ್ನೈಗೆ (ಶನಿವಾರ) ವಿಮಾನ ಯಾನ ಆರಂಭಿಸಲಿದೆ. ಏಪ್ರಿಲ್ 2 ಮತ್ತು ಏಪ್ರಿಲ್ 5 ರಿಂದ ಹಾರಾಟ ಶುರುವಾಗುತ್ತದೆ.
IX 2915 ವಿಮಾನ ಮಂಗಳೂರಿನಿಂದ ಬೆಳಗ್ಗೆ 6.10ಕ್ಕೆ ಹೊರಟು 8 ಗಂಟೆಗೆ ಹೈದರಾಬಾದ್ ತಲುಪಲಿದೆ. IX 2913 ವಿಮಾನವು ಹೈದರಾಬಾದ್‌ನಿಂದ ಸಂಜೆ 5.25 ಕ್ಕೆ ಹೊರಟು 7.15 ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೇ, IX 2917 ವಿಮಾನವು ಮಂಗಳೂರಿನಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 3.40 ಕ್ಕೆ ಚೆನ್ನೈ ತಲುಪಲಿದೆ. ಹಿಂದಿರುಗುವ ವಿಮಾನ, IX 2918 ಚೆನ್ನೈನಿಂದ ಸಂಜೆ 4.20 ಕ್ಕೆ ಹೊರಟು 6 ಗಂಟೆಗೆ ಮಂಗಳೂರನ್ನು ತಲುಪುತ್ತದೆ.
ವಿಮಾನಯಾನ ಸಂಸ್ಥೆಯು ಈ ಎರಡೂ ಮಾರ್ಗಗಳಲ್ಲಿ 186 ಆಸನಗಳ ಬೋಯಿಂಗ್ 737-800 NG ವಿಮಾನವನ್ನು ನಿಯೋಜಿಸಲಿದೆ. ಪ್ರಸ್ತುತ, ಇಂಡಿಗೋ ಈ ಎರಡು ರಾಜಧಾನಿ ಮಾರ್ಗಗಳಿಗೆ 78 ಆಸನಗಳ ATR ವಿಮಾನಗಳ ಸಂಚಾರ ನಡೆಸುತ್ತಿದೆ. ಇಂಡಿಗೋ ಹೈದರಾಬಾದ್‌ಗೆ ಪ್ರತಿದಿನ ಎರಡು ಮತ್ತು ಮೂರು ವಾರಕ್ಕೊಮ್ಮೆ ಮತ್ತು ಚೆನ್ನೈಗೆ ಎರಡು ದೈನಂದಿನ ವಿಮಾನಗಳ ಯಾನ ನಡೆಸುತ್ತಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಈ ಎರಡೂ ಹೊಸ ಮಾರ್ಗಗಳಿಗೆ ಬುಕಿಂಗ್ ಅನ್ನು ತೆರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು