7:13 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ವಿವಾಹ ರದ್ದು: ತಮ್ಮ ತಮ್ಮ ಊರಲ್ಲೇ ಸರಳ ಮದುವೆಗೆ ಅವಕಾಶ

22/04/2021, 04:42

ಧರ್ಮಸ್ಥಳ(reporterkarnataka news):

ಕೋವಿಡ್-19 ಕುರಿತು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ

ಏ.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ತಮ್ಮ ತಮ್ಮ ಊರಿನಲ್ಲೇ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮುಖೇನ ವಧು-ವರರ ಮನೆಗೆ ಮುಟ್ಟಿಸಲಾಗುವುದು. ಏ.29 ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ತಮ್ಮ ಊರಿನ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿಕೊಳ್ಳಬಹುದು.

ಈ ಸಂದರ್ಭ ಯೋಜನೆಯ ಕಾರ್ಯಕರ್ತರೋರ್ವರು ಹಾಜರಿದ್ದು, ಮದುವೆಯನ್ನು ಸರಳವಾಗಿಯೂ, ಸರಕಾರದ ಕೋವಿಡ್ ಶರತ್ತುಬದ್ಧ ನಿಯಮಾವಳಿಯಂತೆ ಆಚರಿಸಿಕೊಳ್ಳುವಂತೆ ಸೂಚಿಸಲಾಗಿದೆ. ನಂತರ ಕಾನೂನಿನಂತೆ ತಾಲೂಕಿನ ಉಪ ನೋಂದಾವಣಾಧಿಕಾರಿಯವರಲ್ಲಿ ವಿವಾಹ ನೋಂದಣಿಯನ್ನು ಮಾಡಿಕೊಳ್ಳಬಹುದು. ವಿವಾಹ ದಾಖಲಾತಿ ಮಾಹಿತಿಯನ್ನು ಕ್ಷೇತ್ರಕ್ಕೆ ಕಳುಹಿಸಿಕೊಡಬೇಕು ಎಂದು ಶ್ರೀ ಕ್ಷೇತ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು