3:46 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Foreign News | ಮಲೇಷ್ಯಾದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟ: ನೂರಾರು ಮಂದಿಗೆ ಸುಟ್ಟ ಗಾಯ; ಉಸಿರಾಟ ತೊಂದರೆ

02/04/2025, 22:42

ಕೌಲಾಲಂಪುರ(reporterkarnataka.com): ಮಲೇಷ್ಯಾದ ಕೌಲಾಲಂಪುರ ನಗರದ ಹೊರವಲಯದಲ್ಲಿ ಪುಚಾಂಗ್ ಎಂಬಲ್ಲಿ ಗ್ಯಾಸ್ ಪೈಪ್‌ಲೈನ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 100ಕ್ಕೂ ಹೆಚ್ಚು ಮಂದಿ ಸುಟ್ಟಗಾಯಗೊಂಡಿದ್ದಾರೆ.
ಗ್ಯಾಸ್ ಪೈಪ್ವಲೈನ್ ಸ್ಫೋಟದಿಂದ ನಾಗರಿಕರಿಗೆ
ಉಸಿರಾಟದ ತೊಂದರೆಗೀಡಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದೆ. ಸಾವಿನ ಪ್ರಮಾಣ ಇನ್ನೂ ವರದಿ ಆಗಿಲ್ಲ.
ಈ ಅವಘಡದಲ್ಲಿ ಬೆಂಕಿಯ ಕೆನ್ನಾಲಗೆ 20 ಮಹಡಿಗಳ ಮನೆಯಷ್ಟು ಎತ್ತರಕ್ಕೆ ಹರಡಿದ್ದು, ಐದಾರು ಮೈಲಿ ದೂರದಿಂದಲೂ ಕಾಣಿಸುತ್ತಿದೆ ಅಂತೆ. ಇದು ಎಲ್ಲೋ ದೂರದ ಕಥೆ. ನಮ್ಮ ಕರಾವಳಿಯಲ್ಲೂ ನಾವು ಇಂತಹದೇ ಅಗ್ನಿಕುಂಡದ ಮೇಲೆ ಬದುಕುತ್ತಿದ್ದೇವೆ ಎಂಬುದನ್ನು ಮರೆಯುವಂತಿಲ್ಲ. ಮಂಗಳೂರು-ಕೊಚ್ಚಿ ಗ್ಯಾಸ್ ಪೈಪ್‌ಲೈನ್, ಮಂಗಳೂರು – ಹಾಸನ – ಬೆಂಗಳೂರು ಪೈಪ್ ಲೈನ್, ಪೆರ್ಮುದೆಯಿಂದ ಪಾದೂರಿಗೆ ISPRL ಪೈಪ್‌ಲೈನ್.. ಹೀಗೆ.
ರಾಜಕಾರಣಿಗಳ ಗದ್ದಲ, ಬೇಜವಾಬ್ದಾರಿಗಳೆಲ್ಲ ಏನೇ ಇರಲಿ…. ಇಂತಹ ಅಪಾಯಕಾರಿ ಪೈಪ್‌ಲೈನ್‌ಗಳು, ಪೆಟ್ರೋಲಿಯಂ ರಿಸರ್ವ್ ಎಲ್ಲವೂ ಸುವ್ಯವಸ್ಥಿತ ಮತ್ತು ಸುರಕ್ಷಿತವಾಗಿ ಇರುವಂತೆ ಜವಾಬ್ದಾರಿ ಹೊಂದುವ ಬುದ್ಧಿಯನ್ನು ನಮ್ಮ ದೈವದೇವರುಗಳು ನಮ್ಮ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕರುಣಿಸಲಿ. ಈ ಎಲ್ಲ ಪೈಪ್‌ಲೈನ್‌ಗಳು ದಟ್ಟ ಜನಸಂದಣಿಗಳ-ಫಲವತ್ತಾದ ಭೂಮಿಗಳ ನಡುವೆಯೇ ಇರುವಂತಹವು. ಹಾಗಾಗಿ ಕರಾವಳಿಯನ್ನು ಇಂತಹ ಅಗ್ನಿ ಅವಘಡಗಳಿಂದ ರಕ್ಷಿಸುವ ಜವಾಬ್ದಾರಿಯನ್ನು ನಾವು ನಂಬಿದ ದೈವಗಳಿಗೇ ಬಿಡೋಣ.
ಮಲೇಷ್ಯಾದಲ್ಲಿ ಸಂಭವಿಸಿದಂತಹ ಈ ಅವಘಡಗಳ ಸುದ್ದಿ ಕೇಳಿದಾಗಲೆಲ್ಲ, ಮನಸ್ಸು ತಳಮಳಿಸುತ್ತದೆ. ಯಾರದ್ದೋ “ವಿಕಾಸಕ್ಕೆ” ನಮ್ಮ ಜೀವಗಳನ್ನೆಲ್ಲ ನಾವು ಅಡಾವು ಇಟ್ಟು ಕುಳಿತುಕೊಳ್ಳುವ ಸ್ಥಿತಿ ಬಂದಿದೆಯಲ್ಲಾ ಎಂದು.

(ಚಿತ್ರ ಸೌಜನ್ಯ: ರಾಯಿಟರ್)

ಇತ್ತೀಚಿನ ಸುದ್ದಿ

ಜಾಹೀರಾತು