3:53 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Karnataka BJP | ‘ಭೀಮ ಹೆಜ್ಜೆ’ ಸಂಭ್ರಮ ಆಚರಿಸದೆ ರಾಜ್ಯ ಸರಕಾರದಿಂದ ಅಂಬೇಡ್ಕರ್‌ಗೆ ಅವಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆರೋಪ

11/04/2025, 20:10

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಡೇಡ್ಕರ್‌ ಅವರ ʼಭೀಮ ಹೆಜ್ಜೆʼ ಶತಮಾನ ಸಂಭ್ರಮ ಕಾರ್ಯಕ್ರಮ ಆಚರಿಸದೆ ಅವಮಾನಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಇಂದು “ಭೀಮ ಹೆಜ್ಜೆʼ ಶತಮಾನ ಸಂಭ್ರಮ ನಿಮಿತ್ತ ನಿಪ್ಪಾಣಿವರೆಗೆ ಏರ್ಪಡಿಸಿದ್ದ ಬೈಕ್‌ ಜಾಥಾಕ್ಕೆ ಚಾಲನೆ ನೀಡಿದ ವೇಳೆ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಅಂಬೇಡ್ಕರ್‌ ಅವರಿಗೆ ಮತ್ತೂ ಅವಮಾನವನ್ನೇ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕಿ ಶಶಿಕಲಾ ಜೊಲ್ಲೆ ಅವರು ಸರ್ಕಾರದ ಗಮನ ಸೆಳೆದರೂ ರಾಜ್ಯ ಸರ್ಕಾರ “ಭೀಮ ಹೆಜ್ಜೆʼ ಶತಮಾನ ಸಂಭ್ರಮ ಆಚರಣೆಗೆ ಅನಾದಾರ ತೋರಿದೆ. ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಕಾಂಗ್ರೆಸ್ಸಿಗರಿಗೆ ನಿಜವಾದ ಗೌರವವೇ ಇಲ್ಲ. ಮೊನ್ನೆ ಕಾಂಗ್ರೆಸ್‌ ಸಮಾವೇಶದಲ್ಲಿ ದಲಿತ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ದೇಶದ ಜನ ಗಮನಿಸಿದ್ದಾರೆ ಎಂದು ಚಾಟಿ ಬೀಸಿದರು.
ಮಹಾತ್ಮ ಗಾಂಧಿ ಅವರು ಬೆಳಗಾವಿಗೆ ಬಂದು ಹೋದ ಕಾರಣಕ್ಕೆ “ನೂರು ವರ್ಷದ ಸಂಭ್ರಮʼ ಎಂಬ ನೆಪದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಧಿವೇಶನ ನಡೆಸಿಕೊಂಡಿತು. ಆದರೆ, ಅದೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸಂವಿಧಾನ ಶಿಲ್ಪಿ, ದಲಿತ ನಾಯಕ ಡಾ.ಅಂಬೇಡ್ಕರ್‌ ಅವರು ಬಂದು ಹೋದ ಸವಿ ನೆನಪಿಗೆ “ಭೀಮ ಹೆಜ್ಜೆʼ ಶತಮಾನದ ಸಂಭ್ರಮ ನಡೆಸಲು ಮುಂದಾಗಲಿಲ್ಲ ಏಕೆ? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದರು.
ಮಹಾತ್ಮ ಗಾಂಧಿ ಶತಮಾನ ಸಂಭ್ರಮ ಸಮಾರಂಭವನ್ನೂ ಸರ್ಕಾರ ಅಚ್ಚುಕಟ್ಟಾಗಿ ಆಚರಿಸಲಿಲ್ಲ. ಬದಲಾಗಿ ಕಾಂಗ್ರೆಸ್‌ ಪಕ್ಷದ್ದೊಂದು ಅಧೀವೇಶನದ ರೀತಿ ನಡೆಸಿತು. ಈಗ ನೋಡಿದರೆ ಅದೇ ನಿಪ್ಪಾಣಿಗೆ ಅಂಬೇಡ್ಕರ್‌ ಬಂದು ಹೋದ ಸವಿನೆನಪಿಗೆ “ಭೀಮ ಹೆಜ್ಜೆʼ ಶತಮಾನ ಸಂಭ್ರಮ ಸಮಾರಂಭ ಆಯೋಜಿಸದೆ ಇಡೀ ದಲಿತ ಸಮುದಾಯವನ್ನೇ ಅವಮಾನಿಸಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು