3:22 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Good Friday | ಕರಾವಳಿ ಕರ್ನಾಟಕದಲ್ಲಿ ಭಕ್ತಿಭಾವದೊಂದಿಗೆ ಗುಡ್ ಪ್ರೈಡೇ ಆಚರಣೆ: ಉಪವಾಸ, ಧ್ಯಾನ, ಸಾಮೂಹಿಕ ಪ್ರಾರ್ಥನೆ

18/04/2025, 14:39

ಮಂಗಳೂರು(reporterkarnataka.com): ಕ್ರೈಸ್ತರು ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಪ್ರೈಡೇ) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಕರಾವಳಿಯ ಜಿಲ್ಲೆಗಳ ಎಲ್ಲ ಚರ್ಚ್ ಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಎಲ್ಲ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಂಗಳೂರಿನ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಶುಭ ಶುಕ್ರವಾರದ ವಿಧಿವಿಧಾನಗಳನ್ನು ಕಾಸರಗೋಡಿನ ಬೋವಿಕ್ಕಾನದಲ್ಲಿ ನಡೆಸಿಕೊಟ್ಟರು.
ಶಿಲುಬೆಯ ಹಾದಿ:ಕೆಲವು ಚರ್ಚ್ ಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆಗಳನ್ನು ಪ್ರಸ್ತುತ ಪಡಿಸಲಾಯಿತು. ಶಿಲುಬೆಯ ಹಾದಿಯ 14 ಪ್ರಮುಖ ಘಟ್ಟಗಳನ್ನು ನೆನಪಿಸಿ ಧ್ಯಾನಿಸಿ ಪ್ರಾರ್ಥಿಸಿದರು. ಸಂಜೆ ಚರ್ಚ್ ಗಳಲ್ಲಿ ನಡೆದ ಪ್ರಾರ್ಥನಾ ವಿಧಿಗಳಲ್ಲಿ ಬೈಬಲ್ ವಾಚನದ ವೇಳೆ ಧರ್ಮಗುರುಗಳು ರಕ್ತವರ್ಣದ ಪೂಜೆ ಬಟ್ಟೆಯನ್ನು ಧರಿಸಿ ಯೇಸು ಕ್ರಿಸ್ತರ ಕೊನೆಯ ಗಳಿಗೆಗಳ ಕಥನವನ್ನು ಓದಿದರು. ಬಳಿಕ ಪ್ರವಚನ ನೀಡಿದರು. ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ, ಶಿಲುಬೆಯ ಆರಾಧನೆ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು