11:44 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೋವಿಡ 19′ ರ ಸಂದರ್ಭದಲ್ಲಿ ‘ಮಾನಸಿಕ ಯೋಗಕ್ಷೇಮ’ ಆನ್ಲೈನ್ ಕಾರ್ಯಾಗಾರ  

22/05/2021, 15:19

ಮಂಗಳೂರು(reporterkarnataka news); ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು   “ಕೋವಿಡ 19 ರ ಸಂದರ್ಭದಲ್ಲಿ ಮಾನಸಿಕ ಯೋಗಕ್ಷೇಮ” ಎಂಬ ಕಾರ್ಯಾಗಾರವನ್ನು ಆನ್ಲೈನ್  ಮೂಲಕ ಹಮ್ಮಿಕೊಂಡಿತ್ತು.

ಕಾರ್ಯಾಗಾರದ  ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾ.ಸೇ.ಯೋ ಕೋವಿಡ್ ನೋಡಲ್ ಅಧಿಕಾರಿ  ಡಾ.  ಶೇಷಪ್ಪ ಅಮೀನ್ ಕೆ.ನೆರವೇರಿಸಿದರು. ಉದ್ಘಾಟನಾ ಮಾತುಗಳನ್ನಾಡಿದ ಡಾ.  ಶೇಷಪ್ಪ ಅಮೀನ್ ಇವರು ಜನರಲ್ಲಿ ಕೊರೋನಾ ದ ಬಗ್ಗೆ ಜಾಗೃತಿಯನ್ನು ಮೂಡಿಸಬೇಕು ಹಾಗೂ ಅಪನಂಬಿಕೆಗಳನ್ನು ವೈಜ್ಞಾನಿಕ ದೃಷ್ಟಿಕೋನದ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬ ಕಿವಿಮಾತುಗಳನ್ನು ಆಡಿದರು. ಇದರ ಜೊತೆಗೆ ನಮ್ಮ ಮನಸ್ಥಿತಿಯನ್ನು ಉತ್ತಮವಾಗಿ ಇರಿಸಿಕೊಳ್ಳಬೇಕು ಎಂಬ ತಿಳುವಳಿಕೆಯನ್ನು ನೀಡಿದರು. ಕೋವಿಡ್ ಸಂದರ್ಭದಲ್ಲಿ ಆನ್ಲೈನ್ ತರಗತಿಗಳು ಜೀವನದ ಕ್ರಮವಾಗಿದೆ. ಎನ್.ಎನ್.ಎಸ್ ಸ್ವಯಂಸೇವಕರು ಮಾನಸಿಕ ಆರೋಗ್ಯದ ವಿಚಾರವಾಗಿ ಹೆಚ್ಚೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ತಲುಪಿಸಿದಾಗ , ಕಾರ್ಯಾಗಾರದ ಉದ್ದೇಶ ಸಫಲವಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಕೊಂಡ ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ.  ಅವರು ವ್ಯಾಯಾಮ ಹಾಗೂ ಉತ್ತಮ ಆಹಾರ ಸೇವನೆಯನ್ನು ಮಾಡುವ ಮೂಲಕ ಮಾನಸಿಕ ಹಾಗು ದೈಹಿಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವಂತೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸಹ್ಯಾದ್ರಿ ಕಾಲೇಜಿನ ಆರೋಗ್ಯ ಮತ್ತು ಸಮಾಲೋಚನಾ ಕೇಂದ್ರದ ಸಲಹೆಗಾರ ಅಂಕಿತ್ ಎಸ್ ಕುಮಾರ್ ಅವರು ಈ ಕೋವಿಡ ಪರಿಸ್ಥಿತಿಯಲ್ಲಿ ನಮಗೆ ಬೇಕಾದಂತಹ ಮಾನಸಿಕ ಯೋಗಕ್ಷೇಮದ ಬಗ್ಗೆ ವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಇವರು ಮನಸ್ಸನ್ನು ಶುದ್ಧವಾಗಿ ಹಾಗೂ ಸ್ಥಿರವಾಗಿ ಇರಿಸಿಕೊಳ್ಳುವಂತೆ ಸೂಚಿಸಿದರು. ನಾವು ಯಾವುದೇ ವಿಷಯದ ಬಗ್ಗೆ ಹೆಚ್ಚಾಗಿ ಚಿಂತಿಸದೆ ಜೀವಿಸಬೇಕು. ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಲು ಧ್ಯಾನ, ಪ್ರಾಣಾಯಾಮ, ವ್ಯಾಯಾಮ ಹಾಗೂ ನಮಗೆ ಇಷ್ಟವಾದಂತಹ ಕೆಲಸಗಳನ್ನು ಮಾಡುತ್ತಿರಬೇಕು. ಮುಂದೇನಾಗುತ್ತದೆ ಎಂಬುದನ್ನು ಚಿಂತಿಸದೆ ಆ ಕ್ಷಣದಲ್ಲಿ ಜೀವಿಸಬೇಕು. ಅತಿಯಾದರೆ ಅಮೃತವೂ ವಿಷ ಎನ್ನುವಂತೆ,ಅತಿಯಾದ ಚಿಂತೆಯೂ ನಮ್ಮ ಜೀವನದ ಖುಷಿಯನ್ನು ಕಿತ್ತುಕೊಳ್ಳುತ್ತದೆ.ನಮಗೆ ನಡೆಯುತ್ತಿರುವ ವಿಷಯ ದ ಬಗ್ಗೆ ಗಮನ, ಸ್ಪಷ್ಟತೆ ಹಾಗೂ ಏಕಾಗ್ರತೆ ಇರಬೇಕು ಎಂದು ನುಡಿದರು.  ಸರಿಯಾದ ಉಸಿರಾಟ ಮಾಡುವ ವಿಧಾನವನ್ನು ಪ್ರಾತ್ಯಕ್ಶಿಕೆಯ ಮೂಲಕ ತಿಳಿಸಿಕೊಟ್ಟರು.


ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ, ಕಾರ್ಯಾಗಾರದ ಆಯೋಜಕರಾದ ಸೀಮಾ ಪ್ರಭು ಎಸ್. ಅವರು ಪ್ರಾಸ್ಥಾವಿಕ ಮಾತುಗಳನ್ನಾಡಿ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.ಇನ್ನೊರ್ವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾವ್ಯಶ್ರೀ  ಧನ್ಯವಾದ ಸಮರ್ಪಿಸಿದರು. ಸ್ವಯಂಸೇವಕಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು