8:10 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

Kuppepadavu | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ: ಗುರುಪುರ ನಾಡ ಕಚೇರಿ ಮುಂಭಾಗ ಸಂತ್ರಸ್ತರ ಪ್ರತಿಭಟನೆ

19/04/2025, 21:06

ಮಂಗಳೂರು(reporterkarnataka.com): ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು
ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ 7 ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಮುಂಭಾಗ “ನಿವೇಶನ ರಹಿತರ ಹೋರಾಟ ಸಮಿತಿ, ಕುಪ್ಪೆಪದವು” ಇದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
2018ರಲ್ಲಿ ಶಾಸಕ ಡಾ. ಭರತ್ ಶೆಟ್ಡಿ ನೇತೃತ್ವದಲ್ಲಿ ತರಾತುರಿಯುಲ್ಲಿ 97 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ನಿವೇಶನಗಳನ್ನು ಗುರುತು ಮಾಡಲಾಗಿತ್ತು. ಆ ತರುವಾಯ ನಿವೇಶನ ಸ್ವಾಧೀನ ನೀಡದೆ ಬಡ ನಿವೇಶನ ರಹಿತರನ್ನು ಸತಾಯಿಸಲಾಗುತ್ತಿತ್ತು. ಕಳೆದ ಜನವರಿಯಲ್ಲಿ ಸಂತ್ರಸ್ತರು ಹೋರಾಟ ಸಮಿತಿ ರಚಿಸಿಕೊಂಡು ಜಮೀನು ಸ್ವಾಧೀನ ನೀಡುವಂತೆ ಹೋರಾಟ ಆರಂಭಿಸಿದ್ದರು. ಈ ಕುರಿತು ಜನವರಿಯಲ್ಲಿ ಕುಪ್ಪೆಪದವು ಪಂಚಾಯತ್ ಮುಂಭಾಗ ನಡೆದ ಧರಣಿಯಲ್ಲಿ ಮನವಿ ಸ್ವೀಕರಿಸಲು ಆಗಮಿಸಿದ ಡೆಪ್ಯುಟಿ ತಹಶೀಲ್ದಾರ್, ಫೆಬ್ರವರಿ ಕೊನೆಯಲ್ಲಿ ನಿವೇಶನ ಸ್ವಾಧೀನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ತಾಲೂಕು ಆಡಳಿತ ಮಾತು ತಪ್ಪಿದ್ದರಿಂದ ಇಂದು ಗುರುಪುರ ನಾಡ ಕಚೇರಿ ಮುಂಭಾಗ ಪ್ರತಿಭಟನಾ ಪ್ರದರ್ಶನ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ “ನಿವೇಶನ ಸ್ವಾಧೀನ ನೀಡಲು ತಾಂತ್ರಿಕ ಸಮಸ್ಯೆಗಳು ಇವೆ” ಎಂದು ಹೇಳಿದ್ದು ಸಂತ್ರಸ್ತರನ್ನು ಸಿಟ್ಟಿಗೆಬ್ಬಿಸಿತು. ಈ ಕುರಿತು ಸ್ಥಳದಲ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗ್ರಾಮಪಂಚಾಯತ್ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸುವ, ಗುರುತಿಸಿರುವ ಜಮೀನನ್ನು ನೇರ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದರು. ಬಡ ನಿವೇಶನ ರಹಿತರನ್ನು ಕಡೆಗಣಿಸಿರುವ ಶಾಸಕ ಡಾ. ಭರತ್ ಶೆಟ್ಟಿ, ಈ ಕುರಿತು ಧ್ವನಿ ಎತ್ತದ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಯ ನಡೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನಾ ಪ್ರದರ್ಶನವನ್ನು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಿದರು. ಕಾರ್ಮಿಕ ಮುಂದಾಳುಗಳಾದ ಸದಾಶಿವ ದಾಸ್, ನೋಣಯ್ಯ ಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಿವೇಶನ ರಹಿತರ ಹೋರಾಟ ಸಮಿತಿಯ ಸಂಚಾಲಕಿ ವಸಂತಿ ಕುಪ್ಪೆಪದವು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ವಲಯ ಅಧ್ಯಕ್ಷ ಬಾಬು ಸಾಲ್ಯಾನ್, ಗುರುಪುರ ವಲಯ ಬೀಡಿ ಕಾರ್ಮಿಕರ ಸಂಘದ ಮುಖಂಡರಾದ ಹೊನ್ನಯ್ಯ ಅಮೀನ್, ವಾರಿಜ ಕುಪ್ಪೆಪದವು, ಹೋರಾಟ ಸಮಿತಿಯ ಸದಾಶಿವ ಕಟ್ಟೆಮಾರ್, ಜಮೀಲಾ ಮಾಣಿಪಳ್ಳ, ಮಜೀದ್ ಕಲ್ಲಾಡಿ, ಕುಸುಮಾ ಕುಪ್ಪೆಪದವು, ರಜಿಯಾ ಮಾಣಿಪಳ್ಳ, ಬಾಲಕೃಷ್ಣ ಶೆಟ್ಟಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು