3:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಜನ್ಮಾಷ್ಟಮಿಗೆ ಕೃಷ್ಣನಗರಿ ಉಡುಪಿ ಸೇರಿದಂತೆ ನಾಡಿನಾದ್ಯಂತ ಕ್ಷಣಗಣನೆ ಆರಂಭ: ಮನೆ ಮನೆಗಳಲ್ಲಿ ತೊಟ್ಟಿಲು ಶೃಂಗಾರ

29/08/2021, 14:31

ಮಂಗಳೂರು(reporterkarnataka.com):

ನಾಡಿನಾದ್ಯಂತ ನಾಳೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದ್ದು, ಕ್ಷಣಗಣನೆ ಆರಂಭವಾಗಿದೆ. ಕೃಷ್ಣನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಕೊರೊನಾದ ಕರಿನೆರಳಿನ ಮಧ್ಯೆ ಸರಳ ಆಚರಣೆ ಸಿದ್ದತೆ ನಡೆದಿದೆ. ಇಲ್ಲಿನ ಅಷ್ಟಮಠಗಳಲ್ಲಿ ನಿತ್ಯ ಪೂಜೆಯ ಜತೆಗೆ ವಿಶೇಷ ಆರಾಧನೆ ನಡೆಯಲಿದೆ.

ಸಾಮಾನ್ಯವಾಗಿ ಭಾದ್ರಪದ ಮಾಸದ ಕೃಷ್ಣ ಅಷ್ಟಮಿಯ ದಿನವನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಮಧ್ಯರಾತ್ರಿ ಶ್ರೀ ಕೃಷ್ಣ ಜನಿಸಿದ ಎಂದು ಶಾಸ್ತ್ರಗಳಲ್ಲಿ ಉಲ್ಲೇಖವಿದೆ. ಇದರ ಅನುಸಾರ ಜನ್ಮಾಷ್ಟಮಿ ಆಚರಿಸಲಾಗುತ್ತದೆ.

ಈ ಅವಧಿಯಲ್ಲಿ ಶ್ರೀ ಕೃಷ್ಣನ ದೇವಸ್ಥಾನಗಳನ್ನು ಸಿಂಗರಿಸಲಾಗುತ್ತದೆ ಮತ್ತು ಮನೆಗಳಲ್ಲಿಯೂ 

ಕೂಡ ಕೃಷ್ಣನ ವಿಗ್ರಹವಿಟ್ಟು ತೊಟ್ಟಿಲನ್ನು ಸಿಂಗರಿಸಲಾಗುತ್ತದೆ. ಪಂಚ್ಯಖಾದ್ಯ ನೈವೇದ್ಯ ತಯಾರಿಸಿ ಶ್ರೀಕೃಷ್ಣನಿಗೆ ಅರ್ಪಿಸಿ ಪೂಜೆ ಸಲ್ಲಿಸಲಾಗುತ್ತದೆ. ದಕ್ಷಿಣ ಭಾರತ ಮಾತ್ರವಲ್ಲದೆ

ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದಕ್ಷಿಣ ಭಾರತದ ಅನೇಕ ಭಾಗಗಳಲ್ಲಿ ಜನ್ಮಾಷ್ಟಮಿಯನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಜನ್ಮಾಷ್ಟಮಿಯನ್ನು

ಎರಡು ದಿನಗಳ ಕಾಲ ಆಚರಿಸಲಾಗುತ್ತದೆ. ಮೊದಲ ದಿನವನ್ನು ಸ್ಮಾರ್ಥ ಸಂಪದಕ್ಕಾಗಿ ಮತ್ತು ಎರಡನೆಯ ದಿನವನ್ನು ವೈಷ್ಣವ ಸಂಪ್ರದಾಯಕ್ಕಾಗಿ ಆಚರಿಸಲಾಗುತ್ತದೆ. ಈ ಬಾರಿ 29 ಆಗಸ್ಟ್ 2021ರಂದು ರಾತ್ರಿ 11.25 ರಿಂದ ಆಗಸ್ಟ್ 30, 2021 ರ ರಾತ್ರಿ 1.59 ಗಂಟೆಯವರೆಗೆ ಅಷ್ಟಮಿ ತಿಥಿ ಇರಲಿದೆ. ಜನ್ಮಾಷ್ಟಮಿಯ ಶುಭ ಮುಹೂರ್ತ ಆಗಸ್ಟ್ 30, 2021 ರಾತ್ರಿ 12.44 ರಿಂದ ತಡರಾತ್ರಿ 12.44ರವರೆಗೆ ಇರಲಿದೆ. ಈ ಅವಧಿಯಲ್ಲಿ ಶ್ರೀ ಕೃಷ್ಣನಿಗೆ ಹೊಸ ವಸ್ತ್ರವನ್ನು ತೊಡಿಸಿ, ಸಿಂಗರಿಸಿ ತೊಟ್ಟಿಲಲ್ಲಿ ತೂಗಲಾಗುತ್ತದೆ.

ಒಂದು ಶುಚಿಗೊಳಿಸಿದ ಚೌರಂಗದ ಮೇಲೆ ಕೆಂಪು ಬಣ್ಣದ ಬಟ್ಟೆಯನ್ನು ಹಾಸಿ, ಒಂದು ತಟ್ಟೆಯಲ್ಲಿ ಶ್ರೀಕೃಷ್ಣನ ಮೂರ್ತಿಯನ್ನಿಡಬೇಕು. ದೇವರ ಮುಂದೆ ಧೂಪ-ದೀಪ ಬೆಳಗಿ ಹಾಗೂ ಪ್ರಾರ್ಥನೆ ಸಲ್ಲಿಸಿ. ಬಳಿಕ ಪಂಚಾಮೃತದಿಂದ ದೇವರಿಗೆ ಅಭಿಷೇಕ ಮಾಡಿ. ನಂತರ ಗಂಗಾ ಜಲದಿಂದ ಸ್ನಾನ ಮಾಡಿಸಿ. ಶ್ರೀ ಕೃಷ್ಣನಿಗೆ ಹೊಸ ಬಟ್ಟೆಯನ್ನು ತೊಡಿಸಿ ಸಿಂಗರಿಸಿ, ಧೂಪ ದೀಪ ಮತ್ತೊಮ್ಮೆ ಬೆಳಗಿ ಆರತಿ ಮಾಡಿ. ಅಷ್ಟಗಂಧ, ಚಂದನ ಹಾಗೂ ಅಕ್ಷತೆಯ ತಿಲಕವನ್ನಿಡಿ. ದೇವರಿಗೆ ಬೆಣ್ಣೆ, ಕಲ್ಲು ಸಕ್ಕರೆ ಹಾಗೂ ಪಂಚಖಾದ್ಯ ನೈವೇದ್ಯ ಅರ್ಪಿಸಲಾಗುತ್ತದೆ.

 ಈ ಸಮಯದಲ್ಲಿ ಶ್ರೀಕೃಷ್ಣನಿಗೆ ತುಳಸಿ ಹಾಗೂ ಗಂಗಾಜಲ ಅರ್ಪಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು