8:38 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ನಿಲ್ಲದ ಬಿಜೆಪಿ – ಶಿವಸೇನೆ ಜಟಾಪಟಿ; ಮುಖ್ಯಮಂತ್ರಿ ಠಾಕ್ರೆ ವಿರುದ್ಧ ಕಮಲ ಪಾಳಯದಿಂದ ದೂರು ದಾಖಲು

29/08/2021, 16:45

ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಜಗಳ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಶಿವಸೇನೆ ಪ್ರಕರಣ ದಾಖಲಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಮುಖ್ಯಮಂತ್ರಿ ಈ ಹಿಂದೆ ನೀಡಿದ್ದಾರೆ ಎನ್ನಲಾದ ನಿಂದನಾತ್ಮಕ ಹೇಳಿಕೆ ಸಂಬಂಧಿಸಿದಂತೆ ವಿರುದ್ಧ ದೂರು ನೀಡಲಾಗಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪತ್ನಿ, ‘ಸಾಮ್ನಾ’ ಸಂಪಾದಕಿ ರಶ್ಮಿ ಠಾಕ್ರೆ ಮತ್ತು ಯುವ ಸೇನೆ ಅಧ್ಯಕ್ಷ ವರುಣ್ ಸರ್ದೇಸಾಯಿ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ಠಾಕ್ರೆ ವಿರುದ್ಧ ವಿವಾದಾತ್ಮಕ ಟೀಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ ಪ್ರಕರಣದ ಬೆನ್ನಲ್ಲೇ ಈ ದೂರುಗಳು ದಾಖಲಾಗಿದೆ. ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಬಿಜೆಪಿ ನಾಯಕರು ನಾಸಿಕ್‌ನಲ್ಲಿ ದೂರು ಸಲ್ಲಿಸಿದ್ದಾರೆ. 

ರಿಷಿಕೇಶ್ ಅವರು ಸಿಎಂ  ಉದ್ಧವ್ ಠಾಕ್ರೆ ಹಾಗೂ ವರುಣ್ ಸರ್ದೇಸಾಯಿ ವಿರುದ್ಧ ಮೊದಲ ದೂರು ದಾಖಲಿಸಿದ್ದಾರೆ. ಸರ್ದೇಸಾಯಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153 (ಎ), 107, 212 ಮತ್ತು ಸೈಬರ್ ಅಪರಾಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುನೀಲ್ ರಘುನಾಥ ಕೇದಾರ್ ಅವರು ಎರಡನೆಯ ದೂರು ಉದ್ಧವ್ ಠಾಕ್ರೆ ವಿರುದ್ಧ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಠಾಕ್ರೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಕ್ರೆ ಮುಖ್ಯಮಂತ್ರಿಯಾಗುವುದಕ್ಕೂ ಮೊದಲು, 2018ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಅದರಲ್ಲಿ ಶಿವಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಪಾದರಕ್ಷೆ ಧರಿಸಿದ್ದ ಯೋಗಿ ಆದಿತ್ಯನಾಥ್​ಗೆ ಅದೇ ಚಪ್ಪಲಿಯಿಂದ ಹೊಡೆಯಬೇಕು ಎಂದು ಠಾಕ್ರೆ ಹೇಳಿದ್ದರು. ಇದನ್ನು ಉಲ್ಲೇಖಿಸಿರುವ ದೂರುದಾರರು, ಆದಿತ್ಯನಾಥ್ ಯುಪಿಯ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮಾತ್ರವಲ್ಲ, ಗೋರಖ್‌ಪುರ ಮಠದ ಪ್ರಧಾನ ಅರ್ಚಕ ಕೂಡ ಆಗಿದ್ದಾರೆ. ಆದ್ದರಿಂದ ಅನೇಕ ಹಿಂದೂಗಳ ಭಾವನೆಗಳಿಗೆ ಠಾಕ್ರೆ ನಡೆಯಿಂದ ನೋವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯದಲ್ಲಿ, ರಾಣೆ ವಿರುದ್ಧ ಅನೇಕ ನಿಂದನೀಯ ಪದಗಳನ್ನು ಬಳಸಲಾಗಿದೆ, ಇದು ಅವರು ಹೊಂದಿರುವ ಕೇಂದ್ರ ಸಚಿವರ ಸಾಂವಿಧಾನಿಕ ಹುದ್ದೆಗೆ ‘ಅವಮಾನ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು