1:07 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Agricultur | ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

01/05/2025, 12:31

ಬೆಂಗಳೂರು(reporterkarnataka.com): ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್‌ ಟನ್‌ ಖರೀದಿ ಮಾಡಲಾಗಿದೆ. ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿಯನ್ನು ರೈತರು ನೋಂದಣಿ ಮಾಡಿಸಿಕೊಂಡಿದ್ದು, ಇನ್ನೂ ಸುಮಾರು 93 ಸಾವಿರ ಮೆಟ್ರಿಕ್‌ ಟನ್‌ ಖರೀದಿ ಮಾಡಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಟನ್‌ಗೆ ರೂ 7,550 ನಿಗದಿಪಡಿಸಿದ್ದು, ಈ ಬೆಲೆ ಕಡಿಮೆಯಾಗಿದ್ದು, ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಪ್ರೋತ್ಸಾಹ ಧನ ಘೋಷಣೆ ಮಾಡಲು ಮನವಿ ಮಾಡಿದಾಗ ಬೇಡಿಕೆಗೆ ಸ್ಪಂದಿಸಿ ಪ್ರತಿ ಕ್ವಿಂಟಾಲ್‌ಗೆ ರೂ 450 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದು, ಒಟ್ಟು ಪ್ರತಿ ಕ್ವಿಂಟಾಲ್‌ಗೆ ರೂ 8000ಗಳಂತೆ ಖರೀದಿ ಮಾಡಲಾಗುತ್ತಿದೆ. ರೈತರು ಈ ಅವಕಾಶ ಬಳಕೆ ಮಾಡಿಕೊಂಡು ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ತೊಗರಿ ಮಾರಾಟ ಮಾಡಬಹುದು ಎಂದು ಸಚಿವ ಶಿವಾನಂದ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು