6:25 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕದನ ವಿರಾಮ ಘೋಷಿಸಿದ ಕೆಲವೇ ತಾಸಿನಲ್ಲಿ ಶ್ರೀನಗರದಲ್ಲಿ ಸ್ಫೋಟ: ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ; ಪಂಜಾಬ್ ಮತ್ತೆ ಬ್ಲ್ಯಾಕ್‌ಔಟ್‌

10/05/2025, 23:12

ನವದೆಹಲಿ(reporterkarnataka.com): ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ತಾಸುಗಳಲ್ಲಿ ಶ್ರೀನಗರದಲ್ಲಿ ಸ್ಫೋಟ ನಡೆದಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ನಗರವನ್ನು ಕತ್ತಲಿನಲ್ಲಿ ಇಡಲಾಗಿದೆ.
ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ ಮತ್ತು ಶ್ರೀನಗರದಲ್ಲಿ ಅನೇಕ ಸ್ಫೋಟಗಳು ಸಂಭವಿಸಿವೆ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ಗಂಟೆಗಳ ನಂತರ ಶನಿವಾರ ರಾತ್ರಿ ಶ್ರೀನಗರದಲ್ಲಿ ಬಹು ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬಂದವು. “ಕದನ ವಿರಾಮಕ್ಕೆ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳು ಕೇಳಿ ಬಂದವು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, “ಇದು ಕದನ ವಿರಾಮವಲ್ಲ” ಎಂದು ಸೇರಿಸಿದ್ದಾರೆ. ಮೂಲಗಳ ಪ್ರಕಾರ ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ, ಶ್ರೀನಗರದಲ್ಲಿ ಹಲವು ಸ್ಫೋಟಗಳು ಸಂಭವಿಸಿವೆ.
*ಮತ್ತೆ ಬ್ಲ್ಯಾಕ್‌ಔಟ್‌ ಜಾರಿ:* ಪಂಜಾಬ್‌ನ ಅಮೃತಸರ, ಫಿರೋಜ್‌ಪುರ, ಬರ್ನಾಲಾ, ಪಠಾಣ್‌ಕೋಟ್, ಬಟಿಂಡಾ ಮತ್ತು ಸಂಗ್ರೂರ್ ಸೇರಿದಂತೆ ಹಲವು ನಗರಗಳಲ್ಲಿ ಬ್ಲ್ಯಾಕ್‌ಔಟ್ ಜಾರಿಗೊಳಿಸಲಾಗಿದೆ. ಕೆಲವು ಜಿಲ್ಲಾಡಳಿತಗಳು ಇದನ್ನು “ಮುನ್ನೆಚ್ಚರಿಕೆ ಕ್ರಮ” ಎಂದು ಹೇಳಿವೆ. ಗುಜರಾತ್‌ನ ಕಚ್‌ನಲ್ಲಿ, ಗೃಹ ಖಾತೆಯ ರಾಜ್ಯ ಸಚಿವ ಹರ್ಷ ಸಾಂಘವಿ ಅವರು “ಹಲವಾರು ಡ್ರೋನ್‌ಗಳನ್ನು ಗುರುತಿಸಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು