9:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸಂಘಟಿತ ಪ್ರಯತ್ನದಿಂದ ಶ್ರೀಮಹಾ ಪವಮಾನ ಯಾಗ ಯಶಸ್ವಿ: ರಾಮದಾಸ್ ಬಂಟ್ವಾಳ ಮೆಚ್ಚುಗೆ

26/05/2025, 22:29

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಹಿಂದೂ ಸಮಾಜವನ್ನು ಸಂಘಟಿಸುವ ಮೂಲ ಉದ್ದೇಶದಿಂದ ಮಹಾಪವಮಾನ ಯಾಗ ಯಶಸ್ವಿಯಾಗಿದೆ ಎಂದು ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಭಾನುವಾರ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದ ನೂತನ ಸಭಾಂಗಣದಲ್ಲಿ ನಡೆದ ಮಹಾಪವಮಾನ ಯಾಗದ ಅವಲೋಕನ ಸಭೆಯಲ್ಲಿ ಮಾತನಾಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನದಲ್ಲಿ ಊರಪರವೂರ ಭಕ್ತರ, ಮಾತೆಯರ ಸಕ್ರಿಯ ಭಾಗವಹಿಸುವಿಕೆ ಯಾಗದ ಯಶಸ್ಸಿಗೆ ಕಾರಣವಾಯಿತು. ಸುಮಾರು ೫ ಸಾವಿರಕ್ಕೂ ಅಧಿಕ ಮಂದಿ ಯಾಗದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ಮೇ ೧೬ರಿಂದ ೧೮ರ ವರೆಗೆ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದಲ್ಲಿ ೧೦೮ ಪವಮಾನ ಪಾರಾಯಣ ಸಹಿತ ಶ್ರೀ ಮಹಾಪವಮಾನ ಯಾಗ, ೧೦೮ ಲಕ್ಷ ಶ್ರೀರಾಮ ನಾಮ ತಾರಕ ಜಪಯಜ್ಞ, ಆಂಜನೇಯ ದೇವರಿಗೆ ಸಹಸ್ರ ಕದಳಿ ಯಾಗ, ವಿಷ್ಣು ಸಹಸ್ರನಾಮ ಪಾರಾಯಣ ನೆರವೇರಿತ್ತು.
ಮಂದಿರ ಸಮಿತಿ ಗೌರವಾಧ್ಯಕ್ಷ ಸೇಸಪ್ಪ ದಾಸಯ್ಯ, ಆರೆಸ್ಸೆಸ್ ಮುಖಂಡ ವಿನೋದ್ ಕೊಡ್ಮಾಣ್, ಪ್ರಮುಖರಾದ ಗಣೇಶ್ ದಾಸ್ ಕಾಮೆರೆಕೋಡಿ, ಶೇಖರ ಶೆಟ್ಟಿ ಪೊಟ್ಟುಗುಡ್ಡೆ, ತಾರನಾಥ ಕೊಟ್ಟಾರಿ ತೇವು, ಉಮೇಶ್ ಗಾಂದೋಡಿ, ಹರಿಪ್ರಸಾದ್ ಭಂಡಾರಿಬೆಟ್ಟು, ಸಂದೇಶ್ ದರಿಬಾಗಿಲು, ಸತೀಶ್ ಪಲ್ಲಮಜಲು, ದಿವಾಕರ ಶೆಟ್ಟಿ ಕುಪ್ಪಿಲ, ನಿತೇಶ್ ಪಲ್ಲಮಜಲು, ಪ್ರಶಾಂತ್ ಬೆದ್ರಗುಡ್ಡೆ, ಮನೋಜ್ ಪಲ್ಲಮಜಲು, ಚೈತನ್ಯ ಗಣೇಶ್ ದಾಸ್, ಜ್ಯೋತಿ ಮಧು ಆಚಾರ್ಯ, ದೀಕ್ಷಿತಾ, ನಿವೇದಿತಾ, ಯಶಸ್ವಿನಿ ಉಮೇಶ್ ಕುಲಾಲ್, ಹೊನ್ನಮ್ಮ ಆನಂದ ಗೌಡ, ಶಶಿಕಲಾ ಸದಾಶಿವ, ರಮಿತಾ ಸುರೇಶ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು