4:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು