4:43 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

11/06/2025, 14:14

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಯಿತು. ಅವರು ಮಾತಾನಾಡಿ, ಎಲ್ಲರನ್ನೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹುಕಾರ್‌ ಕಿರಣ್‌ ಪೈ ಅವರು ಸನ್ಮಾನಿತರನ್ನು ಸನ್ಮಾನಿಸಿ, ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು ನೀಡಿದರು.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊರವರು ಕವಿಗೋಷ್ಟಿಯನ್ನು ನಡೆಸಿದರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ, ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.
ಅಕಾಡೆಮಿ ಸದಸ್ಯರಾದ ದಯಾನಂದ ಮಡ್ಕೇಕರ್‌ರವರು ಧನ್ಯವಾದ ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ಶ್ರೀ ನವೀನ್‌ ಲೋಬೊ, ಸಮರ್ಥ್‌ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ
ಸಪ್ನಾ ಮೇ ಕ್ರಾಸ್ತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು