7:10 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!!

12/06/2025, 21:53

ಅಹಮದಾಬಾದ್(reporterkarnataka.com):
ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ
ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ.
ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇಶ್ ಬಿಸ್ವಾಸ್ ಎಂಬವರೇ ಸಾವಿನಿಂದ ಗೆದ್ದು ಬಂದ ಮೃತ್ಯುಂಜಯ. ರಮೇಶ್ ಬಿಸ್ವಾಸ್ ಅವರು ವಿಮಾನಕ್ಕೆ ಬೆಂಕಿ ಹತ್ತಿಕೊಳ್ಳುವುದರೊಳಗೆ ವಿಮಾನದಿಂದ ಹೊರಗೆ ಜಿಗಿದಿದ್ದಾರೆ. ಸಣ್ಣಪುಟ್ಟ ಗಾಯಗಳನ್ನು ಬಿಟ್ಟರೆ ಬಿಸ್ವಾಸ್ ಅವರಿಗೆ ಬೇರೆ ಏನೂ ತೊಂದರೆಯಾಗಿಲ್ಲ. ಅವರು ನಡೆದುಕೊಂಡೇ ದುರಂತ ಸ್ಥಳದಿಂದ ಹೊರಗೆ ಬಂದಿದ್ದಾರೆ. ಟೇಕ್ ಆಫ್ ಆದ 30 ಸೆಕೆಂಡ್‌ಗಳಲ್ಲಿ ವಿಮಾನ ಪತನಗೊಂಡಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗೇಟ್‌ವಿಕ್ ವಿಮಾನ ನಿಲ್ದಾಣಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

ಭಾರತದ 169 ಮಂದಿ ಸೇರಿದಂತೆ 53 ಬ್ರಿಟನ್ ಪ್ರಜೆಗಳು ಹಾಗೂ ಇತರರು ಸೇರಿ ಒಟ್ಟು 243 ಮಂದಿ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಇವರಲ್ಲಿ ಭಾರತೀಯ ಮೂಲದ ಬ್ರಿಟನ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶರಾಗಿ ಬದುಕುಳಿದಿದ್ದಾರೆ.

ವಿಮಾನದ ತುರ್ತು ನಿರ್ಗಮನ ದ್ವಾರದ ಬಳಿಯ 11ಏ ಸೀಟ್‌ನಲ್ಲಿ ಆಸೀನರಾಗಿದ್ದ, ರಮೇಶ್ ಅವರು ವಿಮಾನ ಪತನಗೊಳ್ಳುತ್ತಿದ್ದ ಸಂದರ್ಭದಲ್ಲಿ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು