10:29 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

Tumkur | ತುಮಕೂರು ಭವಿಷ್ಯದ ಉದ್ಯೋಗ ಅವಕಾಶಗಳ ತವರೂರು: ಎಂ. ಎಸ್. ಪಾಟೀಲ್

25/06/2025, 11:39

ತುಮಕೂರು(reporterkarnataka.com): ಕಲ್ಪತರು ನಾಡು ತುಮಕೂರು ಜಿಲ್ಲೆ ಉದ್ಯೋಗ ಅವಕಾಶಗಳ ಬೃಹತ್ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಶ್ರೀದೇವಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ. ಎಸ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ೨೦ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬೆಂಗಳೂರಿನ ನಂತರ ಬೃಹತ್ ಉದ್ಯೋಗ ಸೃಷ್ಟಿಸುವ ಭವಿಷ್ಯದ ನಗರವಾಗಿ ತುಮಕೂರು ಬೆಳೆಯಲಿದೆ ಹೀಗಾಗಿ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿದೆ. ದೇಶದ ಮತ್ತು ವಿದೇಶಿ ಬಂಡವಾಳದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂಡವಾಳ ಹೂಡಲು ತುಮಕೂರು ನಗರವನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಆಟೋಮೊಬೈಲ್ ಸಾಫ್ಟ್ ವೇರ್ ಸೇರಿದಂತೆ ಅನೇಕ ಉದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಮುಂದೆ ಬರುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಮೆಟ್ರೋ ಸಂಪರ್ಕ ತುಮಕೂರಿಗೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಈ ಎಲ್ಲಾ ಕಾರಣಗಳಿಂದ ಬೆಂಗಳೂರಿನ ನಂತರ ತುಮಕೂರು ೨ನೇ ಮತ್ತು ಭವಿಷ್ಯದ ನಗರವಾಗಲಿದೆ ಎಂದು ಹೇಳಿದರು.
ಕಾಲೇಜಿನ ಮೆಡಿಕಲ್ ಡೈರೆಕ್ಟರ್ ಡಾ. ರಮಣ್ ಹುಲಿನಾಯ್ಕರ್ ಮಾತನಾಡಿ, ಇಂದಿನ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಂಡರೆ ಉದ್ಯೋಗ ತಾನಾಗಿ ಹುಡುಕಿಕೊಂಡು ಬರುತ್ತದೆ. ಸಾಮಾಜಿಕ ಜಾಲತಾಣಗಳ (ಸೋಷಿಯಲ್ ಮೀಡಿಯಾ) ದಾಸರಾಗಬೇಡಿ ಮತ್ತು ಹೆಚ್ಚಿನ ಸಮಯವನ್ನು ಇದರಲ್ಲೇ ಕಳೆಯಬೇಡಿ. ಕಾಲೇಜಿನ ಪಾಠದ ಕಡೆ ಹೆಚ್ಚು ಗಮನ ಕೊಡಬೇಕು ಭವಿಷ್ಯದ ಸವಾಲುಗಳನ್ನು ಎದುರಿಸುವಂತಹ ಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ನೆಲಮಂಗಲ ತಾಲೂಕಿನ ವಣಕಲ್ ಮಲ್ಲೇಶ್ವರ ಸಂಸ್ಥಾನ ಮಠದ ಡಾ.ಬಸವ ರಮಾನಂದ ಸ್ವಾಮೀಜಿ ಮಾತನಾಡಿ, ಆಧ್ಯಾತ್ಮ ಎಂದರೆ ಅಂತರಂಗ ಶುದ್ಧಿ. ಜಗತ್ತು ಸರಿಯಾದ ಹಾದಿಯಲ್ಲಿ ನಡೆಯಬೇಕು. ಪಾಪ, ವಂಚನೆ, ಮೋಸ ಇಲ್ಲದ ಸಮಾಜ ಇರಬೇಕು ಎನ್ನುವುದು ಧರ್ಮ. ಮೊಬೈಲ್ ಬಂದ ಮೇಲೆ, ಸೋಷಿಯಲ್ ಮೀಡಿಯಾಗಳ ಹಾವಳಿ ಹೆಚ್ಚಾದ ನಂತರ ಬಹಳಷ್ಟು ಜನರ ಆರೋಗ್ಯ ಹದಗೆಟ್ಟಿದೆ. ಇಂತಹ ಚಟಗಳಿಂದ ದೂರ ಇರುವುದನ್ನು ಕಲಿತರೆ ಒಳ್ಳೆಯದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಶ್ರೀನಿವಾಸ್ ಮತ್ತು ಆಡಳಿತ ಅಧಿಕಾರಿ ಬ್ರಹ್ಮದೇವಯ್ಯ, ರಂಗಧಾಮಯ್ಯ, ಮೊದಲಾದವರು ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಹೆಚ್ಚು ಅಂಕ ಪಡೆದ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು