11:40 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನ: ಜು.13ರಿಂದ ತನು ಮನ ಧನ ಸಂಗ್ರಹ ಅಭಿಯಾನ

09/07/2025, 21:14

ಮಂಗಳೂರು(reporterkarnataka.com):ಹಿಂದೂ ಯುವ ಸೇನೆಯ ಪದವು ಶಾಖೆಯು ಕಳೆದ ಎರಡೂವರೆ ದಶಕಗಳ ಪೂರ್ವದಲ್ಲಿ ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದ್ದು, ಈ ದೆಶೆಯಲ್ಲಿ ಗ್ರಾಮದ ಜನರಿಂದ ತನು ಮನ ಧನದ ಸಹಕಾರವನ್ನು ಯಾಚಿಸುತ್ತಿದ್ದು ಜು.13ರಂದು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು ಇದಕ್ಕಾಗಿ 11 ವಲಯ ಸಮಿತಿಗಳನ್ನು ರಚಿಸಲಾಗಿದೆ.
ಈ ಕುರಿತು ಅಧ್ಯಕ್ಷ ಕದ್ರಿ ನವನೀತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಶ್ರೀ ದುರ್ಗಾ ದೇವಿ ಹಾಗೂ ಮಹಾಗಣಪತಿ ಗುಡಿ ಸಹಿತ ಶ್ರೀ ಶನಿ ದೇವರ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ನವೆಂಬರ್ 2025ರಲ್ಲಿ ಪ್ರತಿಷ್ಠೆ ಬ್ರಹ್ಮಕಲಶ ನಡೆಸಲಾಗುವುದು ಎಂದು ನವನೀತ್ ಶೆಟ್ಟಿ ಹೇಳಿದರು.
ಈಗಾಗಲೇ ಮಂದಿರದ ಸಮೀಪ 8 ಸೆಂಟ್ಸ್ ಸ್ಥಳವನ್ನು ಖರೀದಿ ಮಾಡಲಾಗಿದ್ದು ಇನ್ನೂ ಹೆಚ್ಚುವರಿ 10 ಸೆಂಟ್ಸ್ ಜಮೀನು ಖರೀದಿ ಮಾಡುವ ಯೋಜನೆ ಇದೆ.
ಈ ಯೋಜನೆಗೆ ಒಟ್ಟು 3 ಕೋಟಿ ರೂಪಾಯಿ ವೆಚ್ಚ ತಗಲಲಿದೆ.
ದೇವಸ್ಥಾನದ ನಿರ್ಮಾಣ ಕಾರ್ಯವು ಊರ ಪರವೂರ ಭಕ್ತರ ಸಹಾಯದಿಂದ ಭರದಿಂದ ಸಾಗುತ್ತಿದ್ದು ಮುಂದಿನ ಕೆಲಸ ಕಾರ್ಯಗಳಿಗೆ ಆರ್ಥಿಕ ಕ್ರೋಡಿಕರಣವಾಗಬೇಕಾಗಿದೆ.
2018ರಲ್ಲಿ ಪದವು ಶನೈಶ್ಚರ ಪೂಜಾ ಸಮಿತಿ ಟ್ರಸ್ಟ್‌ನ ನೇತೃತ್ವದಲ್ಲಿ 7 ದಿನ ಪರ್ಯಂತ ಜರಗಿದ್ದ ಚಾರಿತ್ರಿಕ ಶ್ರೀ ಸಗ್ರಹಮುಖ ಶನೈಶ್ಚರ ಮಹಾಯಾಗದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂಸೇವಕರ, ಭಕ್ತರ ಭಕ್ತಿಯ ಫಲಶ್ರುತಿಯಿಂದಾಗಿ ಶನಿದೇವರ ದೇವಸ್ಥಾನವು ನಿರ್ಮಾಣವಾಗುತ್ತಿದೆ ಎಂದವರು ತಿಳಿಸಿದರು.
ಈ ದೆಶೆಯಲ್ಲಿ ಗ್ರಾಮದ ಜನರಿಂದ ತನು ಮನ ಧನದ ಸಹಕಾರವನ್ನು ಯಾಚಿಸುತ್ತಿದ್ದು ಜು.13ರಂದು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು ಇದಕ್ಕಾಗಿ 11 ವಲಯ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಗೌರವಾಧ್ಯಕ್ಷ ಮೋನಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಟಾರಿ, ಮಾತೃ ಮಂಡಳಿ ಅಧ್ಯಕ್ಷೆ ವಿಜಯ ಅರುಣ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು