1:32 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳನಿಗೆ ಧರ್ಮದೇಟು

22/07/2025, 16:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲೋಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿ ಯಾದ ಘಟನೆ ನಡೆದಿದೆ.

ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ, ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ. ತಕ್ಷಣ ಎಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು