9:29 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಗಣಪತಿ ಭಟ್ ನೆಲ್ಲಿತೀರ್ಥರಿಗೆ ವಿಪ್ರಭೂಷಣ ಪ್ರಶಸ್ತಿ: 27ರಂದು ಅಶ್ವತ್ಥಪುರದಲ್ಲಿ ಪ್ರದಾನ

25/07/2025, 20:54

ಮಂಗಳೂರು(reporterkarnataka.com): ಅಶ್ವತ್ಥಪುರ ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್‌ ವತಿಯಿಂದ ನೀಡಲಾಗುವ ವಿಪ್ರಭೂಷಣ ಪ್ರಶಸ್ತಿಗೆ ಈ ಬಾರಿ ವೇ.ಮೂ.ಶ್ರೀ ಗಣಪತಿ ಭಟ್ ನೆಲ್ಲಿತೀರ್ಥ ಆಯ್ಕೆಯಾಗಿದ್ದಾರೆ.
ಶ್ರೀ ಗಣಪತಿ ಭಟ್ ಅವರು
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಸೋಮನಾಥೇಶ್ವರ ಗುಹಾಲಯ ನೆಲ್ಲಿತೀರ್ಥ ಇಲ್ಲಿ ಕಳೆದ ಮೂವತ್ತು ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜು. 27ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಸಾವಿತ್ರಿ ಸಭಾ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿ ಕೆ.ವೈ.ಲಕ್ಷ್ಮೀ ತಿಳಿಸಿದ್ದಾರೆ.
ಅಶ್ವತ್ಥಪುರ ಕ್ಷೇತ್ರ ಆಡಳಿತ ಮೋಕ್ತೇಸರ ಕೃಷ್ಣಮೂರ್ತಿ ವಿ.ಎ., ಬೆಂಗಳೂರಿನ ಯುವ ಉದ್ಯಮಿ ಹಾಗೂ ಆರ್ಥಿಕ ಸಲಹೆಗಾರ ಶ್ರೀಕಾಂತ್ ಎಂ.ಜಿ., ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಲ್. ದಿನೇಶ್ ಕುಮಾರ್ ಭಾಗವಹಿಸುವರು.
*ಗೌರವ ಸನ್ಮಾನ:*
ಇದೇ ಸಂದರ್ಭ ವೇ.ಮೂ.ಪ್ರಭಾಕರ ಭಟ್ ಕಂಚಿಬೈಲು ,ಮಾಯಣ ಗೋಪಾಲಕೃಷ್ಣ ರಾವ್ ಉಡುಪಿ, ಶಂಕರ ರಾವ್ ವರ್ಕು, ಹಾಗೂ ಸದಾಶಿವ ರಾವ್ ನೆಲ್ಲಿಮಾರು ಇವರಿಗೆ ಗೌರವ ಸನ್ಮಾನ ನಡೆಯಲಿದೆ.
*ಯಕ್ಷಗಾನ ಪ್ರದರ್ಶನ:*
ಬಳಿಕ ಭರತ್ ರಾಜ್ ಪರ್ಕಳ ನಿರ್ದೇಶನದಲ್ಲಿ ಸೃಷ್ಟಿ ಕಲಾ ವಿದ್ಯಾಲಯ ಬೆಂಗಳೂರು ತಂಡದಿಂದ ‘ಅಭಿಮನ್ಯು ಕಾಳಗ’ ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು