1:38 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ ಆಗಲಿದೆ ಕಣ್ಣೀರ ಕತೆ

31/07/2025, 18:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterarnataka@gmail.com

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಘಟನೆಯೊಂದು ಕೇರಳದಲ್ಲಿ ಸಿನಿಮಾ ಆಗಿ ರೂಪ ಪಡೆಯಲಿದೆ. ನಿಜ ಘಟನೆಗಳನ್ನು ಸಿನಿಮಾ ಮಾಡುವಲ್ಲಿ ಪರಿಣಿತರಾಗಿರುವ ಮಲಯಾಳಿ ಚಿತ್ರರಂಗದವರು ಕಳೆದ ವರ್ಷ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಮಾದವನ್ನು ಸಿನಿಮಾ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಬರೆಯಲಿರುವುದು ಕೇರಳದ ಶಾಸಕ ಎಕೆಎಂ ಅಶ್ರಫ್. ಕಳೆದ ವರ್ಷ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಆ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರ ಶವ ಈ ವರೆಗೆ ಸಿಕ್ಕಿಲ್ಲ. ಮೃತಪಟ್ಟವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಸಹ ಇದ್ದರು. ಆದರೆ ಅರ್ಜುನ್ ಮೃತದೇಹ ಸಿಗದೇ ಇದ್ದ ಕಾರಣ ಆತ ಬದುಕಿದ್ದಾನೆಂದು ನಂಬಲಾಗಿತ್ತು. ಕೇರಳದಲ್ಲಿ ಅರ್ಜುನ್ ಬದುಕಿ ಬರಲೆಂದು ಲಕ್ಷಾಂತರ ಮಂದಿ ಪ್ರಾರ್ಥಿಸಿದ್ದರು. ಸಾಮೂಹಿಕ ಪ್ರಾರ್ಥನೆಗಳನ್ನು ಸಹ ನಡೆಸಿದ್ದರು. ಆದರೆ ಸತತ ಕಾರ್ಯಾಚರಣೆ ಬಳಿಕವೂ ಸಹ ಅರ್ಜುನ್ ಬದುಕಲಿಲ್ಲ. ಬರೋಬ್ಬರಿ ಮೂರು ತಿಂಗಳ ಬಳಿಕ ಅರ್ಜುನ್ ಮೃತದೇಹ ಪತ್ತೆ ಆಯ್ತು. ಅರ್ಜುನ್ ಹುಡುಕಾಟದ ಕಾರ್ಯಾಚರಣೆ ವೇಲೆ ಶಾಸಕ ಅಶ್ರಫ್ ಸ್ಥಳದಲ್ಲಿಯೇ ಹಾಜರಿದ್ದರು. ಎಲ್ಲ ಕಾರ್ಯಾಚರಣೆಗಳನ್ನು ಅವರು ಹತ್ತಿರದಿಂದ ಗಮನಿಸಿದರು. ಇದೀಗ ಅಶ್ರಫ್ ಅವರು ತಮ್ಮ ಆ ಅನುಭವವನ್ನು ಆಧರಿಸಿ ಶಿರೂರು ಗುಡ್ಡ ಕುಸಿತದ ಬಗ್ಗೆ ಕತೆ ಬರೆಯಲಿದ್ದಾರೆ. ಆ ಕಥೆಯೇ ಸಿನಿಮಾ ಸಹ ಆಗಲಿದೆ. ಕೋಯಿಕೋಡಿನ ಅರ್ಜುನ್ ಶವ ಹೊರತೆಗೆಯುವ ಕಾರ್ಯಾಚರಣೆ ಬಲು ರೋಚಕವಾಗಿತ್ತು. ಆ ರೋಚಕತೆ ಮತ್ತು ಅವರ ಕುಟುಂಬದ ಭಾವುಕತೆ, ಕೇರಳದ ಜನರು ಅರ್ಜುನ್​ಗಾಗಿ ಮರುಗಿದ್ದು ಎಲ್ಲವೂ ಸಿನಿಮಾಕ್ಕೆ ವಸ್ತುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು