3:26 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಜನಸಾಮಾನ್ಯರಿಗೆ ತೊಂದರೆ..! ಆಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

01/08/2025, 12:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ತಾಲೂಕು ಕಚೇರಿಗೆ ಬರುವ ಜನಸಾಮಾನ್ಯರಿಗೆ ಮತ್ತು ವಾಹನಗಳಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ಸಾರ್ವಜನಿಕರು ದೂರಿದ್ದಾರೆ.

ತಾಲೂಕು ಕಚೇರಿಗೆ ನಿತ್ಯ ತಮ್ಮ ದೈನಂದಿನ ಕೆಲಸಗಳಿಗಾಗಿ ಬಂದಿರುವ ಜನಸಾಮಾನ್ಯರಿಗೆ ಓಡಾಡಲು ಕೂಡ ತೊಂದರೆಯಾಗುವ ರೀತಿಯಲ್ಲಿ ಕೆಲವು ಜನರು ವಾಹನ ತಂದು ಪಾರ್ಕಿಂಗ್‌ನಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಾರೆ. ತಾಲೂಕು ಕಚೇರಿ ಆವರಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಇತ್ತ ಶಿವಮೊಗ್ಗ, ಉಡುಪಿ, ಮಂಗಳೂರಿಗೆ ಬಸ್ ಹತ್ತಿ ಹೊಗುತ್ತಿರುವ ದೂರು ಕೇಳಿ ಬಂದಿದೆ. ಪಟ್ಟಣದ ರಸ್ತೆ ಅಕ್ಕ ಪಕ್ಕ ವಾಹನಗಳನ್ನು ಪಾರ್ಕಿಂಗ್ ಮಾಡಿದಂತೆ ತಾಲೂಕು ಕಚೇರಿ ಆವರಣದಲ್ಲಿ ಪಾರ್ಕಿಂಗ್ ಮಾಡಿ ಬೇರೆ ಕಡೆ ಹೋಗುತ್ತಾರೆ. ಇದರಿಂದ ತಾಲೂಕು ಕಚೇರಿಗೆ ಬರುವ ಇತರೆ ವಾಹನಗಳಿಗೆ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ ಎಂಬ ಮಾತು ಕೂಡ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಈ ರೀತಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಆಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ತಾಲೂಕು ಆಡಳಿತ ಗಮನ ಹರಿಸಿ ಓರ್ವ ಸೆಕ್ಯೂರಿಟಿ ಗಾರ್ಡ್ ನೇಮಿಸುವಂತೆ ತಾಲೂಕ ಕಚೇರಿ ಬಂದು ತಮ್ಮ ಕಚೇರಿಯ ಕೆಲಸ ಮುಗಿಸಿ ತಮ್ಮ ವಾಹನವನ್ನು ತೆಗೆಯಲಾಗದೆ ಗಂಟೆಗಟ್ಟಲೆ ಕಾದು ಕಾದು ನೊಂದ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು