3:26 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆ: ಕಕ್ಕಡ ಪದ್’ನೆಟ್ಟ್ ಪ್ರಯುಕ್ತ ಪಂಜಿನ ಮೆರವಣಿಗೆ

04/08/2025, 14:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಹಿತರಕ್ಷಣಾ ಬಳಗ, ಕ್’ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ವತಿಯಿಂದ ಭಾನುವಾರ 14ನೇ ವರ್ಷದ ಕಕ್ಕಡ ಪದ್ ‘ನೆಟ್ಟ್ ಹಬ್ಬ ಆಚರಣೆ ಮತ್ತು ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಪಂಜಿನ ಮೆರವಣಿಗೆ ಆಕರ್ಷಕವಾಗಿ ನಡೆಯಿತು.
ಪೊನ್ನಂಪೇಟೆ ಕೊಡವ ಸಮಾಜದಿಂದ ಪಂಜು ಹಿಡಿದು ಸಾಂಪ್ರದಾಯಿಕ ಉಡುಗೆ ತೊಡಗೆಗಳನ್ನು ಧರಿಸಿ ವಾಲಗದೊಂದಿಗೆ ಹೊರಟ ಕೊಡವರು ಬಸವೇಶ್ವರ ದೇವಾಲಯ ಸತ್ತು ಹಾಕಿ ನಂತರ ಕೊಡವ ಸಮಾಜದಲ್ಲಿ ಸಮಾಗಮಗೊಂಡರು.
ಕೊಡವ ಸಮಾಜದಲ್ಲಿ ದಿನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಟೆಲಿಫಿಲ್ಮ್ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ದಿನದ ಅಂಗವಾಗಿ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮ ಚಿರಿಯಪಂಡ ಎಂ. ರಾಜನಂಜಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಕೊಡವ ಎಜುಕೇಶನ್ ಸೊಸೈಟಿ (ಸಿಐಟಿ) ಅಧ್ಯಕ್ಷರಾದ ಡಾ. ಮುಕ್ಕಾಟಿರ ಸಿ. ಕಾರ್ಯಪ್ಪ, ಮತ್ತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಹಾಗೂ ಕೊಡವ ಜಾನಪದ ತಜ್ಞ ಕಾಳಿಮಾಡ ಎಂ. ಮೋಟಯ್ಯ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಪ್ರಗತಿಪರ ಕಾಫಿ ಬೆಳೆಗಾರ ಕಳ್ಳಿಚಂಡ ಚಂಗಪ್ಪ, 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಂಬಂಡ ಆಶ್ರಯಿ ಅಕ್ಕಮ್ಮ, ದ್ವಿತೀಯ ಪಿ ಯು ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಟ್ರಂಗಡ ಪನ್ಯ ಪೊನ್ನಮ್ಮ ಅವರನ್ನು ಸನ್ಮಾನಿಸಿದರು.
ನಂತರ ಸಾಮೂಹಿಕವಾಗಿ ಸಾಂಪ್ರದಾಯಿಕ ಕಕ್ಕಡ ಖಾದ್ಯ ತಿನಿಸು ಹಾಗೂ ವಿಶೇಷ ಉಟೋಪಚಾರ ಅಚ್ಚುಕಟ್ಟಾಗಿ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಸಂಖ್ಯಾ ಕೊಡವರು ಒಟ್ಟಾಗಿ ಸೇರಿ ಕಕ್ಕಡ 18 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು