11:46 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ರಾತ್ರಿ ವೇಳೆ ಕಾಡಾನೆ ದಾಳಿಗೆ ಚೆoಬು ಗ್ರಾಮದ ರೈತ ದಾರುಣ ಸಾವು

07/08/2025, 10:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕು ಚೆoಬು ಗ್ರಾಮದ ದಬ್ಬಡ್ಕ ಭಾಗದಲ್ಲಿ ಕಳೆದ ರಾತ್ರಿ 9 ಗಂಟೆಗೆ ಆನೆ ದಾಳಿಯಿಂದ ಸ್ಥಳೀಯ ಕೊಪ್ಪದ ಶಿವಪ್ಪ (72) ಎಂಬ ರೈತ ಮೃತಪಟ್ಟ ದಾರುಣ ಘಟನೆ ನಡೆದಿದೆ.
ರಾತ್ರಿ 8:30 ಗಂಟೆಗೆ ಕೊಪ್ಪದ ಶಿವಪ್ಪ ತನ್ನ ಮನೆಯ ಮುಂಭಾಗದಲ್ಲಿ ಸದ್ದು ಕೇಳಿ ಬಂದ ಹಿನ್ನೆಲೆಯಲ್ಲಿ ಮನೆಯಿಂದ ಹೊರಬಂದು ಮನೆಯ ಮುಂಭಾಗದಿಂದ 30 ಮೀಟರ್ ದೂರದಲ್ಲಿ ನಡೆದು ಕೊಂಡು ಹೋದಾಗ ಕಾಡಾನೆ ದಿಢೀರ್ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಆನೆ ದಾಳಿಯಿಂದ ಎದೆ ಭಾಗ ಹಾಗೂ ಬೆನ್ನಿನ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳು ಉಂಟಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭ ಶಿವಪ್ಪ ಮೃತಪಟ್ಟಿದ್ದಾರೆ.

ಘಟನೆ ಸುದ್ದಿ ತಿಳಿದೊಡನೆ ಶಾಸಕ ಎ. ಎಸ್. ಪೊನ್ನಣ್ಣನವರ ಸೂಚನೆ ಮೇರೆಗೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಶವವನ್ನು ಇರಿಸಿದ ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.
ಆನೆ ಹಾವಳಿಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದಾಗ ಅವರನ್ನು ಸಮಾಧಾನಪಡಿಸಿ ಶಾಸಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪರಿಣಾಮ ಕೂಡಲೇ ಆ ಭಾಗದಲ್ಲಿ ಇರುವ ಒಂದು ಪುಂಡಾನೆಯನ್ನು ಹಿಡಿಯಲು ಬೇಕಾದ ಎಲ್ಲಾ ಇಲಾಖೆ ಕಾನೂನುಗಳನ್ನು ಈಡೇರಿಸಿ ಶೀಘ್ರದಲ್ಲಿ ಆನೆ ಹಿಡಿಯಲು ಅನುಮತಿ ಕೊಡಿಸಿ ಕೊಡುವುದಾಗಿ ಶಾಸಕರು ಭರವಸೆ ನೀಡಿದ್ದಾರೆ ಎಂದು ಸಂಕೇತ್ ಪೂವಯ್ಯ ಹೇಳಿದ್ದಾರೆ.
ಆನೆ ಓಡಿಸುವ ಕಾರ್ಯಾಚರಣೆ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಈಗಾಗಲೇ ಸೂಚಿಸಿದರಲ್ಲದೆ ಅರಣ್ಯ ಇಲಾಖೆಗೆ ಹೆಚ್ಚು ಸಿಬ್ಬಂದಿ ಒದಗಿಸುವ ಭರವಸೆಯನ್ನು ಶಾಸಕರು ನೀಡಿದ್ದಾರೆ ಎಂದು ಗ್ರಾಮಸ್ಥರಿಗೆ ಸಂಕೇತ್ ಪೂವಯ್ಯ ಭರವಸೆಯನ್ನು ಈ ಸಂದರ್ಭ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು